AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 05, 2021 | 11:08 AM

Share

ಬೆಂಗಳೂರು: ಮಗಳ ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ ಬಂಧಿತ ಆರೋಪಿ. ನಿವೇಶ್ ಕುಮಾರ್(19) ಕೊಲೆಯಾದ ಯುವಕ.

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ. ಮನೆಗೆ ಬರುತ್ತಿದ್ದಂತೆ ಮಗಳು ಆತನ ಪ್ರಿಯಕರನ ಜೊತೆ ಇರುವುದನ್ನು ಕಂಡು ಕೋಪಗೊಂಡು ನಿವೇಶ್ ಹತ್ಯೆಗೈದಿದ್ದಾನೆ.

ನಾರಾಯಣ್ ಮನೆಯಲ್ಲಿದ್ದ ಕಟ್ಟಿಗೆಯಿಂದ ನಿವೇಶ್ ತಲೆಗೆ ಹೊಡೆದಿದ್ದಾನೆ. ನಂತರ ಅಪರಿಚಿತ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆ ವೇಳೆಗೆ ನಿವೇಶ್ ಮೃತಪಟ್ಟಿದ್ದ. ಕಲಾಸಿಪಾಳ್ಯ ಪೊಲೀಸರು ಆಸ್ಪತ್ರೆ ಮಾಹಿತಿ ಅಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ನಿವೇಶ್ ಕಾಣಿಸುತ್ತಿಲ್ಲ ಎಂದು ನಿವೇಶ್ ಪೋಷಕರು ವಿ.ವಿ.ಪುರಂ ಠಾಣೆಗೆ ದೂರು ನೀಡಿದ್ದರು. ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿದೆ. ನಿವೇಶ್ನನ್ನು ಆಸ್ಪತ್ರೆಗೆ ದಾಖಲಿಸಿದ ನಾರಾಯಣ್ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಕಲಾಸಿಪಾಳ್ಯದಿಂದ ಪ್ರಕರಣ ವರ್ಗಾಯಿಸಿಕೊಂಡು ವಿ.ವಿ.ಪುರಂ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್