Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಹೆಂಡತಿ ಜೊತೆ ಜಗಳ, ಮಗನನ್ನೇ ಕಿಡ್ನಾಪ್ ಮಾಡಿಸಿದ ತಂದೆ

ಹೆಂಡತಿ ಜೊತೆ ಜಗಳ ಮಾಡಿಕೊಂಡ ಪತಿ ತನ್ನ ಮಗನನ್ನೇ ಕಿಡ್ನಾಪ್ ಮಾಡಿಸಿರುವ ಘಟನೆ ನಡೆದಿದೆ. ಈ ಪ್ರಕರಣ ಪೊಲೀಸರಿಗೆ ತಲೆನೋವು ತಂದಿದೆ. ಕಿಡ್ನಾಪ್ ಮಾಡಿಸಿದ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Bengaluru News: ಹೆಂಡತಿ ಜೊತೆ ಜಗಳ, ಮಗನನ್ನೇ ಕಿಡ್ನಾಪ್ ಮಾಡಿಸಿದ ತಂದೆ
ಮಗು ಕಿಡ್ನಾಪ್​ಗೆ ಬಳಸಲಾದ ಆಟೋ
Follow us
TV9 Web
| Updated By: ಆಯೇಷಾ ಬಾನು

Updated on:Jun 17, 2023 | 8:05 AM

ಬೆಂಗಳೂರು: ಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿನಂತೆ ಹೆಂಡತಿ ಜೊತೆ ಜಗಳ ಮಾಡಿಕೊಂಡ ಪತಿ ತನ್ನ ಮಗನನ್ನೇ ಕಿಡ್ನಾಪ್(kidnap) ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗು ಕಿಡ್ನಾಪ್​ ಅನ್ನು ಕಣ್ಣಾರೆ ಕಂಡ ಸಬ್ ಇನ್ಸ್ ಪೆಕ್ಟರ್ ಕಿಡ್ನಾಪ್​ ಮಾಡಿಕೊಂಡು ಹೋದ ಆಟೋವನ್ನು ಚೇಸ್ ಮಾಡಿ ಆರೋಪಿಗಳನ್ನು ಹಿಡಿದಿದ್ದಾರೆ. ಸದ್ಯ ತಂದೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಜೂನ್ 16ರ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದ ಆ ಒಂದು ಘಟನೆ ಪೊಲೀಸರಿಗೆ ಕೆಲ ಘಂಟೆಗಳ ಕಾಲ ತಲೆನೋವು ತರಿಸಿತ್ತು. ಗಂಡ ಹೆಂಡತಿಯ ನಡುವಿನ ಆ ಒಂದು ಜಗಳ ಮಗನನ್ನು ಸಿನಿಮೀಯ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿಸಿದ್ದು ಈ ಘಟನೆ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು. ತನ್ನ ಮಗುವನ್ನು ತಂದೆಯೇ ತಾಯಿಯಿಂದ ಕರೆದೊಯ್ದಿದ್ದು, ಇದು ಕಿಡ್ನಾಪ್ ಅಂತ ತಾಯಿ ಆರೋಪಿಸಿದ್ದಾರೆ. ಅಸಲಿಗೆ ನೈಟ್ ಡ್ಯೂಟಿ ಮುಗಿಸಿದ್ದ ವಿದ್ಯಾರಣ್ಯಪುರ ಸಬ್ ಇನ್ಸ್ ಪೆಕ್ಟರ್ ಶುಕ್ರವಾರ ಬೆಳಿಗ್ಗೆ ಮನೆ ಕಡೆ ತೆರಳುತಿದ್ರು. ಈ ವೇಳೆ ಜಿಕೆವಿಕೆ ಬಳಿ ಶಾಲೆಗೆ ಮಗುವನ್ನು ಕರೆದೊಯ್ಯುತಿದ್ದ ತಾಯಿ ಅಡ್ಡಗಟ್ಟಿದ ಎರಡು ಆಟೋದಲ್ಲಿ ಬಂದ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಮಹಿಳೆಯ ಬಳಿ ಇದ್ದ ಮಗುವನ್ನು ಎಳೆದುಕೊಂಡಿದ್ರು. ಬಳಿಕ ಪುರುಷ ತಾನು ಬಂದಿದ್ದ ಆಟೋದಲ್ಲಿ ಮಗುವನ್ನು ಕರೆದೊಯ್ದಿದ್ದ. ಮತ್ತೊಂದೆಡೆ ಇದನ್ನು ಕಂಡ ಸಬ್ ಇನ್ಸ್ ಪೆಕ್ಟರ್ ಕೂಡಲೇ ಹೊಯ್ಸಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು ಮತ್ತೊಂದು ಆಟೋದಲ್ಲಿ ಮೂವರು ಮಹಿಳೆಯರು ಸಹಿತ ಆಟೋ ಚಾಲಕನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: 5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ

ಆಗ ಮಗು ಕಿಡ್ನಾಪ್ ಕೇಸ್​ನ ಸತ್ಯ ಬಯಲಾಗಿದೆ. ಅಸಲಿಗೆ ಮಗುವಿನ ತಾಯಿ ಹಾಗೂ ತಂದೆ ಬೇರೆ ಬೇರೆ ವಾಸವಿದ್ದಾರೆ. ತಾಯಿ ಬಳಿ ಇದ್ದ ಮಗುವನ್ನು ತಂದೆ ಕರೆದೊಯ್ದಿದ್ದಾನಂತೆ. ಆದ್ರೆ ಈ ವಿಚಾರ ಕಿಡ್ನಾಪ್ ರೀತಿ ಕಂಡಿದ್ದು ಪೊಲೀಸರೇ ಒಂದು ಕ್ಷಣ ಟೆನ್ಶನ್ ಆಗಿದ್ದರು. ಸದ್ಯ ಕೊಡಿಗೆಹಳ್ಳಿ ಪೊಲೀಸರಿಂದ ಮಗು ಕರೆದೊಯ್ದ ತಂದೆ ಬಗ್ಗೆ ಮಾಹಿತಿ ಕಲೆಹಾಕುತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Sat, 17 June 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ