AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಕಾಮಾಕ್ಷಿಪಾಳ್ಯದಲ್ಲಿ ಭೀಕರ ಘಟನೆ, ಟ್ರಿಪ್ ವಿಚಾರಕ್ಕೆ ಚಾಕು ಇರಿದು ಮಗನನ್ನೇ ಕೊಂದ ತಂದೆ

ತಂದೆ ಹಾಗೂ ಮಗ ಇಬ್ಬರೂ RTO ಕಚೇರಿಯಲ್ಲಿ ಏಜೆಂಟರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಗ ಸಂತೋಷ್ ಪ್ರವಾಸಕ್ಕೆ ಹೋಗಿ ಬಂದಿದ್ದ. ಇದೇ ವಿಚಾರಕ್ಕೆ ಗಲಾಟೆ ನಡೆದು ತಂದೆ ಮಗನನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇಷ್ಟೇ ಅಲ್ಲದೆ ಹತ್ಯೆ ಬಳಿಕ ಸಾಕ್ಷ್ಯ ನಾಶಗೊಳಿಸಲು ಗುರುರಾಜ್ ಯತ್ನಿಸಿದ್ದಾನೆ.

Murder: ಕಾಮಾಕ್ಷಿಪಾಳ್ಯದಲ್ಲಿ ಭೀಕರ ಘಟನೆ, ಟ್ರಿಪ್ ವಿಚಾರಕ್ಕೆ ಚಾಕು ಇರಿದು ಮಗನನ್ನೇ ಕೊಂದ ತಂದೆ
ಪ್ರಾತಿನಿದಿಕ ಚಿತ್ರ
TV9 Web
| Edited By: |

Updated on:Oct 11, 2021 | 7:19 PM

Share

ಬೆಂಗಳೂರು: ತಂದೆಯಿಂದಲೇ ಮಗನ ಬರ್ಬರ ಹತ್ಯೆ ನಡೆದಿರುವ ಭೀಕರ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕೃಷ್ಣ ಕನ್ವೆನ್ಷನ್ ಹಾಲ್ ಬಳಿ ನಡೆದಿದೆ. ಚಾಕು ಇರಿದು ಮಗ ಸಂತೋಷ್ನನ್ನು ತಂದೆ ಗುರುರಾಜ್ ಹತ್ಯೆಗೈದಿದ್ದಾರೆ.

ತಂದೆ ಹಾಗೂ ಮಗ ಇಬ್ಬರೂ RTO ಕಚೇರಿಯಲ್ಲಿ ಏಜೆಂಟರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಗ ಸಂತೋಷ್ ಪ್ರವಾಸಕ್ಕೆ ಹೋಗಿ ಬಂದಿದ್ದ. ಇದೇ ವಿಚಾರಕ್ಕೆ ಗಲಾಟೆ ನಡೆದು ತಂದೆ ಮಗನನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇಷ್ಟೇ ಅಲ್ಲದೆ ಹತ್ಯೆ ಬಳಿಕ ಸಾಕ್ಷ್ಯ ನಾಶಗೊಳಿಸಲು ಗುರುರಾಜ್ ಯತ್ನಿಸಿದ್ದಾನೆ.

ಮಗನನ್ನು ಕೊಲೆ ಮಾಡಿ ಮನೆ ತುಂಬಾ ಚೆಲ್ಲಾಡಿದ್ದ ರಕ್ತವನ್ನು ತೊಳೆದಿದ್ದಾನೆ. ಸದ್ಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮತ್ತೊಂದು ಕಡೆ ಕುಡಿದ ಮತ್ತಿನಲ್ಲಿ ಮಹಿಳೆ ಸರ ಕದಿಯಲು ಹೋಗಿ ಸಿಕ್ಕಿಬಿದ್ದ ಕಳ್ಳನಿಗೆ ಗೂಸಾ ಕೊಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರಲ್ಲಿ ನಡೆದಿದೆ. ಹಾಗೂ ಕಳ್ಳನನ್ನ ಥಳಿಸಿ ಜನ ಪೊಲೀಸರಿಗೊಪ್ಪಿಸಿದ್ದಾರೆ.

ಹನುಮಕ್ಕ ಎಂಬುವರ ಮಾಂಗಲ್ಯ ಸರ ಕದಿಯಲು ಯತ್ನಿಸಿದ ಕಲಬುರಗಿ ಮೂಲದ ಮಾರುತಿಯನ್ನ ಜನರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಗೋಡಂಬಿ ಫ್ಯಾಕ್ಟರಿ ಸಿಬ್ಬಂದಿ ಕೊಲೆ ಪ್ರಕರಣ; ನಾಪತ್ತೆಯಾಗಿದ್ದ ಡಿಎಂಕೆ ಸಂಸದ ಕೋರ್ಟ್​ನಲ್ಲಿ ಶರಣು

ತಾಯಿ-ಮಗುವನ್ನು ಕೊಂದಿದ್ದ ಆರೋಪಿ ಅರೆಸ್ಟ್; ಅರೆಬೆತ್ತಲೆ ವಿಡಿಯೋ ಕೊಲೆಗೆ ಕಾರಣ!

Published On - 7:10 pm, Mon, 11 October 21

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ