AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಚ್ಚಿಬಿದ್ದ ಬೆಂಗಳೂರಿಗರು, ಸ್ವಂತ ಮನೆ ಬಿಟ್ಟು ಬಾಡಿಗೆ ಮನೆಗೆ ಶಿಫ್ಟ್

ಮಾನ್ಸೂನ್​ಗೂ ಮುಂಚಿತವಾಗಿಯೇ ರಾಜಧಾನಿಗೆ ರಣ ಮಳೆಯ ಎಫೆಕ್ಟ್ ತಟ್ಟಿದೆ. ಕಳೆದ ಬಾರಿ ಸುರಿದಿದ್ದ ಮಳೆಯಿಂದಾಗಿ ನೆರೆಗೆ ತುತ್ತಾಗಿದ್ದ ಜನರಲ್ಲಿ ಮತ್ತೆ ಆತಂಕ ಕಾಡಿದೆ. ಸ್ವಂತ ಮನೆ ಇದ್ದರೂ ಬಾಡಿಗೆ ಮನೆಯಲ್ಲಿ ಇರಬೇಕಾದ ಸ್ಥಿತಿ ಇವರಿಗೆ ಎದುರಾಗಿದೆ.

Bengaluru Rain: ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಚ್ಚಿಬಿದ್ದ ಬೆಂಗಳೂರಿಗರು, ಸ್ವಂತ ಮನೆ ಬಿಟ್ಟು ಬಾಡಿಗೆ ಮನೆಗೆ ಶಿಫ್ಟ್
ಮಳೆ
ಆಯೇಷಾ ಬಾನು
ಆಯೇಷಾ ಬಾನು|

Updated on: May 28, 2023 | 1:14 PM

Share

ಮುಖ್ಯಾಂಶಗಳು

  • ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಚ್ಚಿಬಿದ್ದ ಸಿಲಿಕಾನ್ ಜನರು
  • ಮಾನ್ಸೂನ್ ಗೂ ಮುಂಚಿತವಾಗಿಯೇ ರಾಜಧಾನಿಗೆ ತಟ್ಟಿರುವ ರಣ ಮಳೆಯ ಎಫೆಕ್ಟ್
  • ಗುಳಿ ಹೊರಟ ನಗರದ ಹೊರಮಾವು ಬಳಿಯ ಸಾಯಿ ಲೇಔಟ್ ಜನ

ಬೆಂಗಳೂರು: ಮಳೆಗಾಲ ಆರಂಭಕ್ಕೂ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾರೀ ಅನಾಹುತಗಳು ಸಂಭವಿಸಿವೆ(Bengaluru Rain). ಹೀಗಾಗಿ ಈ ಅವಘಡಗಳಿಂದ ತಪ್ಪಿಸಿಕೊಳ್ಳಲು ರಾಜಕಾಲುವೆ(Rajakaluve) ಪ್ರದೇಶಗಳಲಿದ್ದ ಜನರು ಬೇರೆಡೆಗೆ ಶಿಫ್ಟ್ ಆಗಿದ್ದಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜಕಾಲುವೆ ಸಮಸ್ಯೆಯಾಗಿ ಆ ಪ್ರದೇಶಗಳಲಿದ್ದ ಜನ ಸಮಸ್ಯೆ ಎದುರಿಸುವಂತಾಗುತ್ತಿತ್ತು. ಹೀಗಾಗಿ ಜನರು ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದಾರೆ. ಸ್ವಂತ ಮನೆಯಿದ್ದರೂ ಬಾಡಿಗೆ ಮನೆಯಲ್ಲಿರುವಂತಾಗಿದೆ.

ಮಾನ್ಸೂನ್​ಗೂ ಮುಂಚಿತವಾಗಿಯೇ ರಾಜಧಾನಿಗೆ ರಣ ಮಳೆಯ ಎಫೆಕ್ಟ್ ತಟ್ಟಿದೆ. ಕಳೆದ ಬಾರಿ ಸುರಿದಿದ್ದ ಮಳೆಯಿಂದಾಗಿ ನೆರೆಗೆ ತುತ್ತಾಗಿದ್ದ ಜನರಲ್ಲಿ ಮತ್ತೆ ಆತಂಕ ಕಾಡಿದೆ. ಸ್ವಂತ ಮನೆ ಇದ್ದರೂ ಬಾಡಿಗೆ ಮನೆಯಲ್ಲಿ ಇರಬೇಕಾದ ಸ್ಥಿತಿ ಇವರಿಗೆ ಎದುರಾಗಿದೆ. ನಗರದ ಹೊರಮಾವು ಬಳಿಯ ಸಾಯಿ ಲೇಔಟ್ ಜನರ ಗೋಳು ಕೇಳೋರಿಲ್ಲ. ಇವರಿಗೆ ಸ್ವಂತ ಮನೆ ಇದ್ದರೂ ಬಾಡಿಗೆ ಮನೆ ಮಾಡಿಕೊಂಡು ಮತ್ತೊಂದು ಏರಿಯಾಗೆ ಗುಳೆ ಬಂದಿದ್ದಾರೆ. ಕಳೆದ ಬಾರಿ ಮಳೆಯಿಂದಾಗಿ ಸಾಯಿ ಲೇಔಟ್ ಸಂಪೂರ್ಣ ಜಲಾವೃತವಾಗಿತ್ತು. ಮನೆಯೊಳಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಮನೆಯ ಉಪಕರಣ ನಷ್ಟವಾಗಿತ್ತು. ಇದರಿಂದಾಗಿ ಈ ಬಾರಿಯ ಮಾನ್ಸೂನ್ ಗೂ ಮುಂಚಿತವಾಗಿಯೇ ವಲಸೆ ಬಂದಿದ್ದಾರೆ.

ಇದನ್ನೂ ಓದಿ: Bengaluru Traffic Police: ಬೆಂಗಳೂರಿನಲ್ಲಿ ಮಳೆ ಅವಾಂತಕ್ಕೆ ಬಕೇಟ್, ಕಟ್ಟಿಂಗ್ ಮಿಷನ್, ಸುತ್ತಿಗೆ ಹಿಡಿದು ನಿಂತ ಟ್ರಾಫಿಕ್ ಪೊಲೀಸ್

ಸದ್ಯ ಸಾಯಿ ಲೇಔಟ್​ನಲ್ಲಿ 1000 ಮನೆಗಳಿವೆ. ಇದ್ರಲ್ಲಿ ಈಗಾಗಲೇ 600ಕ್ಕೂ ಹೆಚ್ಚು ಮನೆಗಳ ಜನರು ಶಿಫ್ಟ್ ಆಗಿದ್ದಾರೆ. ನೆರೆ ಆತಂಕದಲ್ಲಿ ಏರಿಯಾ ಬಿಟ್ಟು ಬೇರೆ ಏರಿಯಾಗಳಿಗೆ ಕುಟುಂಬ ಸಮೇತ ಶಿಫ್ಟ್ ಆಗುತ್ತಿದ್ದಾರೆ. ಇನ್ನು ಮತ್ತೊಂದೆಡೆ ಬಿಬಿಎಂಪಿ, ಬಿಡಿಎಯ ರಾಜಕಾಲುವೆ ಕಾಮಗಾರಿ ಇನ್ನೂ ಕೂಡ ಪೂರ್ಣಗೊಂಡಿಲ್ಲ. ರಾಜಕಾಲುವೆ ಸಮಸ್ಯೆಯಿಂದಾಗಿ ಈ ನೆರೆಯ ಸಮಸ್ಯೆ ಉಂಟಾಗಿದೆ. ನೆರೆ ಬಂದು ವರ್ಷವಾದ್ರು ಇನ್ನೂ ಡ್ರೈನೇಜ್ ದುರಸ್ತಿ ಕಾರ್ಯ ನಡೆದಿಲ್ಲ. ಹೊರಮಾವು ಅಗ್ರಹಾರ ಕೆರೆಗೂ ಸಂಪರ್ಕ ಇಲ್ಲ. ಹೀಗಾಗಿ ನೆರೆ ಬಂದು ಸಮಸ್ಯೆಯಾಗುತ್ತಿದೆ. ಕಳೆದ ಬಾರಿಯ ಮಳೆಯ ಹೊಡೆತಕ್ಕೆ ಗೋಡೆಗಳು ಬಿರುಕು ಬಿಟ್ಟಿವೆ. ಅಲ್ಲದೇ ಕೆಲ ಮನೆಗಳು ಕುಸಿದಿವೆ. ಹೀಗಾಗಿ ನೆರೆಯ ಸಹವಾಸವೇ ಬೇಡ ಎಂದು ಮನೆಗೆ ಬೀಗ ಜಡಿದು ಬೇರೆಡೆಗೆ ಜನ ಹೊರಟಿದ್ದಾರೆ. ಸಾಯಿ ಲೇಔಟ್​ನಲ್ಲಿ ಸಾಲು ಸಾಲು ಮನೆಗಳಿಗೆ ಬೀಗ ಹಾಕಲಾಗಿದೆ. ಜನರಿಲ್ಲದೆ ಏರಿಯಾ ಬಿಕೋ ಎನ್ನುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್