AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರಿನಲ್ಲಿ ರಾಷ್ಟ್ರೀಯ ಜನಗಣತಿ–2027ರ ಕಾರ್ಯಾಚರಣೆ ವೇಳೆ ನಿವಾಸಿಯೊಬ್ಬರು ಗಣತಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾಹಿತಿ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಸದ್ಯ ಈ ಕುರಿತಾಗಿ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಾರ್ವಜನಿಕರು ಸಿಬ್ಬಂದಿಗೆ ಸಹಕರಿಸಲು ಆಯುಕ್ತರು ಮನವಿ ಮಾಡಿದ್ದಾರೆ.

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Apr 25, 2026 | 10:55 PM

Share

ಬೆಂಗಳೂರು, ಏಪ್ರಿಲ್​ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ನಡೆದಿದ್ದೇನು?

ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಗಣತಿದಾರರಾದ ಶ್ರೀಮತಿ ವೀಣಾ ಅವರು ಏಪ್ರಿಲ್ 20ರಂದು ಆರ್.ಟಿ. ನಗರದ ಸುಲ್ತಾನಪಾಳ್ಯದ ಪೇರಿ ಮೊನಾರ್ಕ್ ಅಪಾರ್ಟ್‌ಮೆಂಟ್‌ಗೆ ಮಾಹಿತಿ ಸಂಗ್ರಹಿಸಲು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ನಿವಾಸಿಯೊಬ್ಬರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಏಪ್ರಿಲ್ 25ರಂದು ಮೇಲ್ವಿಚಾರಕರಾದ ಶ್ರೀಮತಿ ರಶ್ಮಿ ಆರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕೇಳಿದಾಗ, ಆ ನಿವಾಸಿಯು ಗಣತಿ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಸಿಬ್ಬಂದಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​

ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಜನಗಣತಿ ಅಧಿಕಾರಿ ಡಾ. ಲೋಕೇಶ್ ಅವರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಜನಗಣತಿ ಕಾಯ್ದೆ 1948ರ ಸೆಕ್ಷನ್ 11(1) ಹಾಗೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (BNS) ಕಲಂ 223 ಮತ್ತು 79ರ ಅಡಿಯಲ್ಲಿ ಕ್ರಮಕೈಗೊಳ್ಳಲಾಗಿದೆ.

ಆಯುಕ್ತರಿಂದ ಖಡಕ್ ಎಚ್ಚರಿಕೆ

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜನಗಣತಿ ರಾಷ್ಟ್ರದ ಪ್ರಮುಖ ಕಾರ್ಯವಾಗಿದ್ದು, ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಅಡ್ಡಿಪಡಿಸುವುದು ಕಾನೂನುಬದ್ಧ ಅಪರಾಧವಾಗಿದೆ. ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಮತ್ತು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು, ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ

ಇನ್ನು ಸಾರ್ವಜನಿಕರಿಗೂ ಆಯುಕ್ತರು ಮನವಿ ಮಾಡಿದ್ದು, ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ನಿಖರ ಮಾಹಿತಿ ನೀಡಿ ಸಹಕರಿಸುವುದು ಅವರ ಕಾನೂನುಬದ್ಧ ಕರ್ತವ್ಯವಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ರಾಷ್ಟ್ರದ ಈ ಮಹತ್ವದ ಕಾರ್ಯಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್