AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಯಂತ್ರಗಳ ಸರಬರಾಜು ಮಾಡಿದ್ದ ಆರೋಪಿ ಬಂಧನ

ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ್ ಗೌಡ ಬಂಧಿತ ಆರೋಪಿ. ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನಗೆ ಸ್ಕ್ಯಾನಿಂಗ್ ಯಂತ್ರ ಕೊಟ್ಟಿದ್ದ. ಬಳಿಕ 3 ಸ್ಕ್ಯಾನಿಂಗ್ ಯಂತ್ರಗಳನ್ನ ಭ್ರೂಣ ಪತ್ತೆ ಗ್ಯಾಂಗ್‌ಗೆ ಮಾರಾಟ ಮಾಡಿದ್ದ.

ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಯಂತ್ರಗಳ ಸರಬರಾಜು ಮಾಡಿದ್ದ ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Feb 22, 2024 | 6:32 PM

Share

ಬೆಂಗಳೂರು, ಫೆಬ್ರವರಿ 22: ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ (Fetus gender detection, murder case) ಕ್ಕೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ್ ಗೌಡ ಬಂಧಿತ ಆರೋಪಿ. ಲಕ್ಷ್ಮಣ್ ಗೌಡ ಮಂಗಳೂರಿನಲ್ಲಿ ಆವಿಷ್ಕಾರ ಬ್ರದರ್ಸ್ ಬಯೋ ಮೆಡಿಕಲ್ ಪ್ರೈ.ಲಿ ಕಂಪನಿ ಹೊಂದಿದ್ದ. ಮೂರು ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ನೀಡಿದ್ದ. ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನಗೆ ಸ್ಕ್ಯಾನಿಂಗ್ ಯಂತ್ರ ಕೊಟ್ಟಿದ್ದ. ಬಳಿಕ 3 ಸ್ಕ್ಯಾನಿಂಗ್ ಯಂತ್ರಗಳನ್ನ ಭ್ರೂಣ ಪತ್ತೆ ಗ್ಯಾಂಗ್‌ಗೆ ಮಾರಾಟ ಮಾಡಿದ್ದ. ಈ ಪೈಕಿ ಒಂದು ಸ್ಕ್ಯಾನಿಂಗ್ ಮಷಿನ್​ ನನ್ನು ಸಿಐಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಸದ್ಯ ಪ್ರಕರಣದಲ್ಲಿ 12 ಜನರನ್ನು ಬಂಧಿಸಲಾಗಿದ್ದು, ಸಿಐಡಿ ತಂಡ ಬಹುತೇಕ ತನಿಖೆಯನ್ನು ಮುಕ್ತಾಯಗೊಳಿಸಿದೆ. ಕೆಲವೇ ದಿನಗಳಲ್ಲಿ ಆರೋಗ್ಯ ಇಲಾಖೆಗೆ ವರದಿ ಸಲ್ಲಿಕೆ ಮಾಡಲಿದೆ. ಇತ್ತೀಚಿನ ಸಿಐಡಿ ತಂಡದ ತನಿಖೆಯ ಪ್ರಕಾರ ಭ್ರೂಣ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರಗಳ ಮೂಲ ಸಿಕ್ಕಿರಲಿಲ್ಲ. ಕಳೆದ ಎರಡು ತಿಂಗಳಿಂದ ತನಿಖೆ ನಡೆಸುತ್ತಿದ್ದರೂ ಸಿಐಡಿಗೆ ಸ್ಕ್ಯಾನಿಂಗ್ ಯಂತ್ರಗಳ ಖರೀದಿ ಮೂಲ ಮಾತ್ರ ಪತ್ತೆಯಾಗಿರಲಿಲ್ಲ.

ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ಪ್ರಕರಣ: ತನಿಖೆ ಮುಕ್ತಾಯಗೊಳಿಸಿದ ಸಿಐಡಿ ತಂಡ

ಈ ಬಗ್ಗೆ ಆರೋಗ್ಯ ಇಲಾಖೆಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿರಲ್ಲಿ. ಹೀಗಾಗಿ ಸರ್ಕಾರದಿಂದ ಅನುಮತಿ ಪಡೆದು ಆರೋಗ್ಯ ಇಲಾಖೆಗೆ ವರದಿ ನೀಡಲು ಸಿದ್ದತೆ ಮಾಡಲಾಗಿತ್ತು. ಸ್ಕ್ಯಾನಿಂಗ್ ಯಂತ್ರಗಳ ಮಾರಾಟ ಹಾಗೂ ಬಳಕೆ ಅಕ್ರಮ ಕಂಡುಬಂದಿದ್ದು, ಆದರೆ ಭ್ರೂಣ ಪತ್ತೆಗೆ ಬಳಸುತ್ತಿದ್ದ ಯಂತ್ರಗಳು ತಂದಿದ್ದು ಎಲ್ಲಿ ಎನ್ನುವುದು ನಿಗೂಢವಾಗಿತ್ತು. ಆದರೆ ಸದ್ಯ ಸಿಐಡಿ ಪೊಲೀಸರು ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಸದ್ದಿದ್ದಲ್ಲದೆ ಭ್ರೂಣಹತ್ಯೆ ನಡೀತಿತ್ತು. ಡಿಸೆಂಬರ್ 13 ರಂದು ಅಬಾರ್ಷನ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದರು. ಇದೇ ಆಸ್ಪತ್ರೆಯಲ್ಲಿ ನಡೀತಿದ್ದ ಕರಾಳ ದಂಧೆ ಈಗ ಬಟಾಬಯಲಾಗಿತ್ತು.

ರಾಜ್ಯದಲ್ಲಿ ಅವ್ಯಾಹತವಾಗಿ ನಡೀತಿದ್ದ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಬಯಲಾಗುತ್ತಿದ್ದಂತೆ ಸರ್ಕಾರ ಫುಲ್ ಅಲರ್ಟ್ ಆಗಿತ್ತು. 900 ಭ್ರೂಣಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದಂತೆ ಆರೋಗ್ಯ ಸಚಿವರು ಕೂಡ ಅಲರ್ಟ್ ಆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:12 pm, Thu, 22 February 24

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ