AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಹತ್ಯೆ ಪ್ರಕರಣ: ಮಾತ್ರೆ ಕೊಟ್ಟು ಡೆಲಿವರಿ ರೀತಿಯಲ್ಲಿ ಭ್ರೂಣ ಹೊರ ತೆಗೆಯುತ್ತಿದ್ದ ಆರೋಪಿಗಳು

ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಭ್ರೂಣ ಪತ್ತೆ ಪ್ರಕರಣವನ್ನು ಬೇಧಿಸಿದ್ದರು. ಪ್ರಕರಣ ಸಂಬಂಧ 10 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಡುವೆ ನಡೆದ ತನಿಖೆ ವೇಳೆ ಆರೋಪಿಗಳು ಬಾಯಿಬಿಟ್ಟ ಮಾಹಿತಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ಮಾತ್ರೆ ಕೊಟ್ಟು ಡೆಲಿವರಿ ರೀತಿಯಲ್ಲಿ ಭ್ರೂಣ ಹೊರ ತೆಗೆಯುತ್ತಿದ್ದ ಆರೋಪಿಗಳು
ಭ್ರೂಣ ಹತ್ಯೆ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 02, 2023 | 10:58 AM

Share

ಬೆಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣ (Feticide Case) ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳು ಹೊರಹಾಕಿದ ಮಾಹಿತಿ ತಿಳಿದು ಶಾಕ್ ಆಗಿದ್ದಾರೆ. ಆರು ತಿಂಗಳ ಗರ್ಭಿಣಿಗೆ ಮಾತ್ರೆಯೊಂದನ್ನು ಕೊಟ್ಟು ಬಳಿಕ ಡೆಲಿವರಿ ಮಾದರಿಯಲ್ಲಿ ಆರೋಪಿಗಳು ಭ್ರೂಣವನ್ನು ಹೊರಗೆ ತೆಗೆಯುತ್ತಿದ್ದರು ಎನ್ನುವ ವಿಚಾರ ತಿಳಿದುಬಂದಿದೆ.

ಸಾಮಾನ್ಯವಾಗಿ 14 ರಿಂದ 18 ವಾರಗಳ ಭ್ರೂಣದಲ್ಲಿ ಲಿಂಗ ಪತ್ತೆಯಾಗತ್ತದೆ. ಸ್ಕ್ಯಾನಿಂಗ್ ವೇಳೆ ಲಿಂಗ ಪತ್ತೆಯಾದ ನಂತರ ಭ್ರೂಣ ಹತ್ಯೆ ಮಾಡಲಾಗುತ್ತಿತ್ತು. ಆರು ತಿಂಗಳ ಭ್ರೂಣಗಳನ್ನು ಹತ್ಯೆ ಮಾಡಿರುವ ಅರೋಪಿಗಳು, ಆರಂಭದಲ್ಲಿ ಗರ್ಭಿಣಿಗೆ ಬ್ಲಡ್ ಚೆಕ್ ಮಾಡುತ್ತಿದ್ದರು.

ಇದನ್ನೂ ಓದಿ: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್‌: ಮತ್ತೋರ್ವ ಆರೋಪಿ ಅರೆಸ್ಟ್, ಪ್ರಕರಣ ಸಿಐಡಿಗೆ ವರ್ಗಾವಣೆ

ರಕ್ತದ ಪರೀಕ್ಷೆ ಮಾಡಿದ ನಂತರ ಅಸ್ಪತ್ರೆಯಲ್ಲಿ ಮಂಜುಳಾ ಹಾಗೂ ಚಂದನ್ ಕೆಲಸ ಶುರು ಮಾಡುತ್ತಿದ್ದರು. ಗರ್ಭಿಣಿಗೆ ಮಾತ್ರೆಯೊಂದನ್ನು ನೀಡುತ್ತಿದ್ದರು. ಮಾತ್ರೆ ತೆಗೆದುಕೊಂಡ ಕೆಲ ಸಮಯದ ನಂತರ ಗರ್ಭಿಣಿಗೆ ರಕ್ತ ಸ್ರಾವವಾಗಿ ಭ್ರೂಣ ಹೊರ ಬರುತ್ತಿತ್ತು. ಈ ವೇಳೆ ಚಂದನ್ ಮತ್ತು ಮಂಜುಳಾ ಡೆಲಿವರಿ ಮಾಡಿಸಿದ ರೀತಿಯಲ್ಲಿ ಭ್ರೂಣ ಹೊರ ತೆಗೆಯುತಿದ್ದರು.

ಏನಿದು ಪ್ರಕರಣ?

ಅಕ್ಟೋಬರ್​​ನಲ್ಲಿ ಭ್ರೂಣ ಹತ್ಯೆ ಸಂಬಂಧ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ವೇಳೆ ಬೃಹತ್ ಜಾಲ ಇರುವುದು ಪತ್ತೆಯಾಗಿದೆ. ಅದರಂತೆ ವೈದ್ಯರು ಸೇರಿದಂತೆ 10 ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಾಗ ಎರಡು ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿದ ಆಘಾತಕಾರಿ ವಿಚಾರ ಬಹಿರಂಗವಾಗಿತ್ತು.

ಅಲ್ಲದೆ, ಮಂಡ್ಯ ಮೂಲದ ನಾಲ್ವರು ವ್ಯಕ್ತಿಗಳು ಬೆಂಗಳೂರಿನ ಆಸ್ಪತ್ರೆಗಳಿಗೆ ಭ್ರೂಣ ಪತ್ತೆಗೆ ಬರುವವರ ಮಾಹಿತಿ ಕಲೆಹಾಕಿದ್ದರು. ಬಳಿಕ ಮಧ್ಯವರ್ತಿಗಳ ಸಹಾಯದಿಂದ ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿರುವ ಆಲೆಮನೆಗೆ ಗರ್ಭಿಣಿಯರನ್ನು ಕರೆಸಿಕೊಂಡು ಲಿಂಗ ಪತ್ತೆಮಾಡಿ ಹತ್ಯೆ ಮಾಡುತ್ತಿರುವ ವಿಚಾರವೂ ಬೆಳಕಿಗೆ ಬಂದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್