AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್‌: ಮತ್ತೋರ್ವ ಆರೋಪಿ ಅರೆಸ್ಟ್, ಪ್ರಕರಣ ಸಿಐಡಿಗೆ ವರ್ಗಾವಣೆ

ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ ಆಗಿದ್ದಾರೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್‌: ಮತ್ತೋರ್ವ ಆರೋಪಿ ಅರೆಸ್ಟ್, ಪ್ರಕರಣ ಸಿಐಡಿಗೆ ವರ್ಗಾವಣೆ
ನರ್ಸ್ ಮಂಜುಳಾ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 02, 2023 | 9:38 AM

Share

ಬೆಂಗಳೂರು, ಡಿ.02: ಬೆಂಗಳೂರು ಸೇರಿ 3 ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್‌ (Female Foeticide) ಸಂಬಂಧ ದಿನೇ ದಿನೇ ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇವೆ. ಸದ್ಯ ಈ ಕೇಸ್​ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು (Byappanahalli Police) ಬಂಧಿಸಿದ್ದಾರೆ. ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ ಆಗಿದ್ದಾರೆ. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಕಳೆದ ಹಲವಾರು ದಿನಗಳಿಂದ ಪೊಲೀಸರು ಮಂಜುಳಾರನ್ನು ಹುಡುಕಾಟ ನಡೆಸುತ್ತಿದ್ದರು. ಸದ್ಯ ಮಂಜುಳಾ ಕೆಲಸ ಮಾಡ್ತಿದ್ದ ಖಾಸಗಿ ಆಸ್ಪತ್ರೆಗೆ ತೆರಳಿ ಬೈಯ್ಯಪ್ಪಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್‌ ಸಿಐಡಿಗೆ ವರ್ಗಾವಣೆ

ಇನ್ನು ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧದ ಕೇಸ್ ಫೈಲ್ ಹಾಗು ಬಂಧಿತ ಆರೋಪಿಗಳನ್ನು ಇಂದು ಸಿಐಡಿಗೆ ನೀಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಸಿಐಡಿಯ ಡಿವೈಎಸ್ ಪಿ ನಾಗರಾಜ್ ರನ್ನು ಪ್ರಕರಣದ ಮುಂದಿನ ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಪ್ರಕರಣದ ತನಿಖೆ ನಡೆಸಿದ್ದ ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ಎಂ ಪ್ರಶಾಂತ್ ಅವರು ಕೇಸನ್ನು ವರ್ಗಾಯಿಸಲಿದ್ದಾರೆ.

ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣ ಬಯಲಿಗೆ ತರಲಾಗಿತ್ತು. ಪ್ರಕರಣ ತನಿಖೆ ವೇಳೆ ದಾಖಲಾತಿಗಳ ಸಹಿತ 88 ದಿನಗಳಲ್ಲಿ 242 ಭ್ರೂಣ ಹತ್ಯೆ ಪತ್ತೆಯಾಗಿತ್ತು. ಮಾಹಿತಿ ಮೇರೆಗೆ 900 ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಪ್ರಕರಣದ ಗಂಭೀರತೆ ಅರಿತು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ