AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers Recruitment: ಹೈದರಾಬಾದ್-ಕರ್ನಾಟಕಕ್ಕೆ 5000 ಶಾಲಾ ಶಿಕ್ಷಕರ ನೇಮಕ, ವಿವರ ನೀಡಿದ ಶಿಕ್ಷಣ ಸಚಿವ ನಾಗೇಶ್

ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ಶಿಕ್ಷಣ ಗುಣಮಟ್ಟ ಉತ್ತಮ ಗೊಳಿಸಲು ಶಿಕ್ಷಣ ಇಲಾಖೆ ಪ್ರಯತ್ನ ನಡೆಸಿದೆ. ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ನೇಮಕಕ್ಕೆ ಇಲಾಖೆಯು ಮುಂದಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.

Teachers Recruitment: ಹೈದರಾಬಾದ್-ಕರ್ನಾಟಕಕ್ಕೆ 5000 ಶಾಲಾ ಶಿಕ್ಷಕರ ನೇಮಕ, ವಿವರ ನೀಡಿದ ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Updated By: ಸಾಧು ಶ್ರೀನಾಥ್​|

Updated on:Mar 18, 2022 | 3:10 PM

Share

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರವಾಗಿ 15,000 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ಶಿಕ್ಷಣ ಗುಣಮಟ್ಟ ಉತ್ತಮ ಗೊಳಿಸಲು ಶಿಕ್ಷಣ ಇಲಾಖೆ ಪ್ರಯತ್ನ ನಡೆಸಿದೆ. ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ನೇಮಕಕ್ಕೆ ಇಲಾಖೆಯು ಮುಂದಾಗಿದೆ. ಅದರ ಅಂಗವಾಗಿ ಹೈದರಾಬಾದ್-ಕರ್ನಾಟಕಕ್ಕೆ ಐದು ಸಾವಿರ ಹುದ್ದೆಗಳು ಮೀಸಲು ಇಡಲಾಗಿದೆ. ಉಳಿದ ಕಡೆಗಳಿಗೆ 10 ಸಾವಿರ ಶಿಕ್ಷಕರ ನೇಮಕವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ (School Teachers Recruitment).

ಎಪ್ರಿಲ್ 22 ಅರ್ಜಿ ಹಾಕಲು ಕೊನೆಯ ದಿನ: ಇನ್ನು, ಗಣಿತ ಶಿಕ್ಷಕರ ಕೊರತೆ ನೀಗಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. 21 ಸಾವಿರ ಗಣಿತ ಶಿಕ್ಷಕರ ಹುದ್ದೆಗಳ ಕೊರತೆ ಬಿದ್ದಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಅರ್ಜಿಗೆ ಅವಕಾಶವಿದೆ. ಮಾರ್ಚ್​ 23 ರಿಂದ ಅರ್ಜಿ ಹಾಕಬಹುದಾಗಿದೆ. ಎಪ್ರಿಲ್ 22 ಅರ್ಜಿ ಹಾಕಲು ಕೊನೆಯ ಅವಕಾಶ. ಮೇ 21 ಮತ್ತು 22 ರಂದು ಶಿಕ್ಷಕರ ಹುದ್ಧೆಗೆ ಎಕ್ಸಾಂ ನಿಗದಿಯಾಗಿದೆ.

ಇನ್ನು, 1 ರಿಂದ 8ನೇ ತರಗತಿ ಶಾಲೆಗಳಲ್ಲಿ ಸುಮಾರು 36 ಸಾವಿರ ಶಿಕ್ಷಕರ ಕೊರತೆ ಇದೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ. ಉಳಿದ ಕಡೆ 10 ಸಾವಿರ ಶಿಕ್ಷಕರ ನೇಮಕವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.

ಪರೀಕ್ಷೆ ವಿವರ ಹೀಗಿದೆ: ಒಟ್ಟು 400 ಮಾರ್ಕ್ಸ್ ಗೆ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆ ಜನರಲ್ ಪೇಪರ್ ಆಗಿದ್ದು 150 ಅಂಕ ನಿಗದಿಯಾಗಿದೆ. 2ನೇ ಪತ್ರಿಕೆಗಾಗಿ 150 ಮಾರ್ಕ್ ಇರುತ್ತೆ. ವಿಷಯವಾರು ಪರೀಕ್ಷೆ ಇದಾಗಿರುತ್ತದೆ. ಪಾಸ್ ಆಗಲು 45 ಮಾರ್ಕ್ ಕಡ್ಡಾಯವಾಗಿರುತ್ತದೆ. 3 ನೇ ಪತ್ರಿಕೆ ಭಾಷಾವಾರು ಪರೀಕ್ಷೆಯಾಗಿದ್ದು, 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪಾಸ್ ಆಗಲು 50 ಮಾರ್ಕ್ಸ್ ಕಡ್ಡಾಯವಾಗಿದೆ.

ಎಂಜಿನಿಯರಿಂಗ್ ಪದವೀಧರರೂ ಗಣಿತ ಶಿಕ್ಷಕ ಪರೀಕ್ಷೆಗೆ ಅರ್ಹರು ಎಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳು ಕೂಡ ಈ ಬಾರಿ ಗಣಿತ ಶಿಕ್ಷಕ ನೇಮಕಾತಿ ಪರೀಕ್ಷೆ ಬರೆಯಬಹುದು. ಈ ಬಾರಿ ವಯೋಮಿತಿ 2 ವರ್ಷ ಸಡಲಿಕೆ ಮಾಡಲಾಗಿದೆ. 45 ವರ್ಷದಿಂದ 47 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಇದು SC, ST ಮತ್ತು ಅಂಗವಿಕಲರಿಗೆ ಅನ್ವಯ. ಮಂಗಳಮುಖಿಯರಿಗೆ ವಿಶೇಷವಾಗಿ ಶೇ.1ರಷ್ಟು ಮೀಸಲು ಇಡಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

Published On - 2:17 pm, Fri, 18 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ