AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ, ಕೆಟ್ಟದಾಗಿ ಬೆರಳು ತೋರಿಸಿ ಜಗಳ ಮಾಡಿದ ವಿಡಿಯೋ ವೈರಲ್

ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕ್ಯಾಂಟೀನ್​ನಲ್ಲಿ ಯುವತಿಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ, ಕೆಟ್ಟದಾಗಿ ಬೆರಳು ತೋರಿಸಿ ಜಗಳ ಮಾಡಿದ ವಿಡಿಯೋ ವೈರಲ್
ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ
TV9 Web
| Updated By: ಆಯೇಷಾ ಬಾನು|

Updated on:Oct 11, 2022 | 11:12 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಬ್ಬರು ಹುಡುಗಿಯರ ನಡುವೆ ಜಗಳವಾಗಿದ್ದು ಯುವತಿಯ ಕಿತ್ತಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕ್ಯಾಂಟೀನ್​ನಲ್ಲಿ ಯುವತಿಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ಮೊದಲಿಗೆ, ಇಬ್ಬರು ಯುವತಿಯರ ನಡುವೆ ಜಗಳ ಶುರುವಾಗುತ್ತೆ. ವಾಗ್ವಾದ ನಡೆಯುತ್ತೆ. ಬಳಿಕ ಮಾತಿಗೆ ಮಾತು ಬೆಳೆದು ಇಬ್ಬರೂ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತಾರೆ. ಇಬ್ಬರೂ ಪರಸ್ಪರ ಹೊಡೆದಾಡಿಕೊಂಡು ಕೆಟ್ಟ ಕೆಟ್ಟ ಶಬ್ದಗಳಿಂದ ಜಗಳವಾಡಿ, ಕೆಟ್ಟದಾಗಿ ಬೆರಳು ತೋರಿಸುತ್ತ ವರ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಸಹಾಯದ ಅಗತ್ಯವಿದೆ ಎಂದು ಸೂಚಿಸುವ ಚಿಹ್ನೆಗಳಿವು

ಈ ಯುವತಿಯರ ನಡುವೆ ಜಗಳ ಆಗಲು ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದ್ರೆ ಯುವತಿಯರು ಹೊಡೆದಾಡಿಕೊಂಡರೂ ಯಾರು ಸಹಾಯಕ್ಕೆ ಬರಾದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಇನ್ನು ಇದೇ ರೀತಿಯ ಘಟನೆ ಇತ್ತೀಚೆಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇಬ್ಬರು ಮಹಿಳೆಯರು ತೂಕದ ಯಂತ್ರಕ್ಕಾಗಿ ಜಗಳ ಮಾಡಿದ್ದರು. ವೀಡಿಯೊದಲ್ಲಿ, ಗುಲಾಬಿ ಬಣ್ಣದ ಬಿಗಿಯುಡುಪು ಧರಿಸಿದ ಮಹಿಳೆ ತೂಕದ ಯಂತ್ರವನ್ನು ಬಳಸಲು ತನ್ನ ಸರದಿಗಾಗಿ ಕಾಯುತ್ತಿದ್ದಳು. ಅಷ್ಟರಲ್ಲಿ ಹಸಿರು ಟೀ ಶರ್ಟ್ ತೊಟ್ಟ ಮತ್ತೊಬ್ಬ ಮಹಿಳೆ ಆ ಯಂತ್ರದತ್ತ ಧಾವಿಸಿ ಅವಳನ್ನು ತಳ್ಳುತ್ತಾಳೆ. ನಂತರ ಇಬ್ಬರೂ ಮಹಿಳೆಯರು ಜಗಳವಾಡುತ್ತಾರೆ, ಒಬ್ಬರನ್ನೊಬ್ಬರು ಕಪಾಳಮೋಕ್ಷ ಮಾಡುತ್ತಾರೆ ಮತ್ತು ಪರಸ್ಪರರ ಕೂದಲನ್ನು ಎಳೆದಾಡಿಕೊಂಡು ಜಗಳವಾಡಿದ್ದರು. ಈ ವಿಡಿಯೋ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Tue, 11 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ