AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್​ ಪಕ್ಷದಲ್ಲಿ ಫೈಟ್​​ ವಿಚಾರ: ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ: ಯಡಿಯೂರಪ್ಪ

ಕಾಂಗ್ರೆಸ್​ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಅಂತಾ ಬಡಿದಾಡುತ್ತಿದ್ದಾರೆ.

ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್​ ಪಕ್ಷದಲ್ಲಿ ಫೈಟ್​​ ವಿಚಾರ: ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ: ಯಡಿಯೂರಪ್ಪ
ಮಾಜಿ ಸಿಎಂ ಯಡಿಯೂರಪ್ಪ
TV9 Web
| Edited By: |

Updated on: Jul 21, 2022 | 9:58 AM

Share

ಬೆಂಗಳೂರು: ಕಾಂಗ್ರೆಸ್​ನ (Congress) ಕೆಲ​ ನಾಯಕರು ಸಿಎಂ ಕನಸು ಕಾಣುತ್ತಿದ್ದಾರೆ. ನಾನು ಸಿಎಂ ಆಗ್ಬೇಕು, ನಾನು ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ. ಕಾಂಗ್ರೆಸ್​ನವರ ಕನಸು ನನಸು ಆಗುವುದಿಲ್ಲ ಎಂದು ನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಕೆ.ಆರ್. ಪೇಟೆ ಮತ್ತು ಸುತ್ತಮುತ್ತ ಪ್ರವಾಸ ಮಾಡಿಕೊಂಡು ಬರುತ್ತೇನೆ. ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರನ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾವರಣ ಸೃಷ್ಟಿ ಮಾಡಿದ್ದಾರೆ. ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆ ಆಗುತ್ತಿದೆ.

ಇದನ್ನೂ ಓದಿ: Weather Today: ಮಳೆಯಿಂದ ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಣೆ; ಗುಜರಾತ್​, ದೆಹಲಿ, ತೆಲಂಗಾಣದಲ್ಲಿ ಭಾರೀ ಮಳೆ

ಕಾಂಗ್ರೆಸ್​ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಅಂತಾ ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿ ಆಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗೋದು. ನೂರಕ್ಕೆ ನೂರು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.