AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಕರ್ನಾಟಕ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಘರ್ಷಣೆ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್
ಕಿರಣ್​ ಹನಿಯಡ್ಕ
| Edited By: |

Updated on:Jan 01, 2025 | 5:34 PM

Share

ಬೆಂಗಳೂರು, ಜನವರಿ 01: ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ನಿನ್ನೆ ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯ ಸಾರ್ವಜನಿಕ ಶೌಚಾಲಯದ ಗೋಡೆಗೆ ಪ್ರಿಯಾಂಕ್​​ ಖರ್ಗೆ ರಾಜೀನಾಮೆ ನೀಡಿ, ಸೂಸೈಡ್​ ಹಾಗೂ ಸುಫಾರಿ ಭಾಗ್ಯ ನೀಡಿದ ಕಾಂಗ್ರೆಸ್​ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಅಂಟಿಸಿದ್ದರು. ಆ ಮೂಲಕ ಬೆಂಗಳೂರು ನಗರದ ಸೌಂದರ್ಯಕ್ಕೂ ಧಕ್ಕೆ ತರುವಂತೆ ಅಂಟಿಸುತ್ತಿದದ್ದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಚಿನ್ ಪ್ರಕರಣದಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ, ರಾಜೀನಾಮೆ ಯಾಕೆ ನೀಡಬೇಕು? ಸಿದ್ದರಾಮಯ್ಯ

ಈ ಹಿನ್ನಲೆ ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾ‌ನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧ ಪಿಎಸ್ಐ ಶಶಿಧರ ವಣ್ಣೂರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನು ಗುತ್ತಿಗೆದಾರನ ಆತ್ಮಹತ್ಯೆ ವಿಚಾರವಾಗಿ ಬಿಜೆಪಿ ನಾಯಕರು ಉರಿದುರಿದು ಬೀಳುತ್ತಿದ್ದಾರೆ. ನಾವು ದಾಖಲೆ ತೋರಿಸಿದರೂ ಪ್ರಿಯಾಂಕ್​ಗೆ ಅದು ದಾಖಲೆ ಅಲ್ಲ ಅಂತಾ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಕಲ್ಬುರ್ಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಅಂತಾ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡುಬಿಟ್ಟಿದ್ದಾರೆ ಅಂತಾ ಸಿ.ಟಿ ರವಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಆಂದೋಲ ಸಿದ್ದಲಿಂಗ ಸ್ವಾಮಿ ಹೆಸರೇಕೆ? ಬೆಂಬಲಿಗರು ಹೇಳೋದೇನು? ಇಲ್ಲಿದೆ ವಿವರ

ಇನ್ನು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ವಿಶ್ವಕರ್ಮ ಸಮಾಜದಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:33 pm, Wed, 1 January 25

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ