AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೆ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​; ಎರಡು ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲು

ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಅನುಮತಿ ಇಲ್ಲದೆ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​; ಎರಡು ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲು
ಡಿಕೆ ಶಿವಕುಮಾರ್
TV9 Web
| Edited By: |

Updated on:Feb 06, 2023 | 9:12 AM

Share

ಬೆಂಗಳೂರು: ಅನುಮತಿ ಇಲ್ಲದೆ KPCC ಅಧ್ಯಕ್ಷ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್​ ಎಂಬುವರ ದೂರು ಆಧರಿಸಿ FIR ದಾಖಲಿಸಲಾಗಿದೆ.

ಬಿ4ಯು ಕರ್ನಾಟಕ (B4uKannada) ಹಾಗೂ ಇಂಡಿಯಾ ರಿಪೋರ್ಟ್​ (India report) ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್​​ಗಳು ಹೂ ಇಸ್ ಅಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅನುಮತಿ ಇಲ್ಲದೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿರುವ ಹಿನ್ನೆಲೆ ಐಟಿ ಅಕ್ಟ್ ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಮೇಶ್ ದೂರು ನೀಡಿದ್ದರು. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ.

ಇದನ್ನೂ ಓದಿ: ಡಿಕೆಶಿಗೆ ಟಾಂಗ್ ಕೊಟ್ಟ ಸಹೋದರಿ ಪತಿ: ತವರು ಜಿಲ್ಲೆಯಲ್ಲೇ ಡಿಕೆ ಶಿವಕುಮಾರ್​ಗೆ ಮುಜುಗರ

ಈ ರೀತಿ ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್​ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:12 am, Mon, 6 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!