AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೆ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​; ಎರಡು ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲು

ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಅನುಮತಿ ಇಲ್ಲದೆ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​; ಎರಡು ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಎಫ್​ಐಆರ್​ ದಾಖಲು
ಡಿಕೆ ಶಿವಕುಮಾರ್
TV9 Web
| Updated By: ಆಯೇಷಾ ಬಾನು|

Updated on:Feb 06, 2023 | 9:12 AM

Share

ಬೆಂಗಳೂರು: ಅನುಮತಿ ಇಲ್ಲದೆ KPCC ಅಧ್ಯಕ್ಷ ಡಿಕೆ ಶಿವಕುಮಾರ್, ಮಕ್ಕಳ ವಿಡಿಯೋ ಅಪ್ಲೋಡ್​​ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್​ ಎಂಬುವರ ದೂರು ಆಧರಿಸಿ FIR ದಾಖಲಿಸಲಾಗಿದೆ.

ಬಿ4ಯು ಕರ್ನಾಟಕ (B4uKannada) ಹಾಗೂ ಇಂಡಿಯಾ ರಿಪೋರ್ಟ್​ (India report) ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್​​ಗಳು ಹೂ ಇಸ್ ಅಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅನುಮತಿ ಇಲ್ಲದೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿರುವ ಹಿನ್ನೆಲೆ ಐಟಿ ಅಕ್ಟ್ ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಮೇಶ್ ದೂರು ನೀಡಿದ್ದರು. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ.

ಇದನ್ನೂ ಓದಿ: ಡಿಕೆಶಿಗೆ ಟಾಂಗ್ ಕೊಟ್ಟ ಸಹೋದರಿ ಪತಿ: ತವರು ಜಿಲ್ಲೆಯಲ್ಲೇ ಡಿಕೆ ಶಿವಕುಮಾರ್​ಗೆ ಮುಜುಗರ

ಈ ರೀತಿ ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್​ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:12 am, Mon, 6 February 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?