AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ; ಅಮೃತಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ಮೇ 15ರ ರಾತ್ರಿ ಬಾರ್ ಬಳಿ ಗಲಾಟೆಯಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದಿದ್ದ ಅಮೃತಹಳ್ಳಿ ಪೊಲೀಸರು ಫೋನ್ ನಲ್ಲಿ ಮಾತನಾಡುತ್ತಿದ್ದ ವಕೀಲ ಸುದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ.

ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ; ಅಮೃತಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು
ಅಮೃತಹಳ್ಳಿ ಠಾಣೆ
TV9 Web
| Edited By: |

Updated on:Jun 22, 2022 | 4:03 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ(Assault)  ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಅಮೃತಹಳ್ಳಿ ಠಾಣೆಯ(Amruthahalli Police Station) ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್(FIR) ದಾಖಲಾಗಿದೆ. ವಕೀಲ ಸುದರ್ಶನ್ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 34, 504, 307, 323, 324, 354ರಡಿ ಪ್ರಕರಣ ದಾಖಲಾಗಿದೆ.  ಮೇ 15ರ ರಾತ್ರಿ ಅಮೃಹಳ್ಳಿಯ ಮಾರುತಿ ಬಾರ್ ಬಳಿ ಘಟನೆ ನಡೆದಿದೆ.

ಮೇ 15ರ ರಾತ್ರಿ ಬಾರ್ ಬಳಿ ಗಲಾಟೆಯಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದಿದ್ದ ಅಮೃತಹಳ್ಳಿ ಪೊಲೀಸರು ಫೋನ್ ನಲ್ಲಿ ಮಾತನಾಡುತ್ತಿದ್ದ ವಕೀಲ ಸುದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಬಂದ ಸುದರ್ಶನ್ ಪತ್ನಿಯನ್ನ ಎಳೆದಾಡಿ ಹಲ್ಲೆ ಮಾಡಿರುವುದಾಗಿ ಅಮೃತಹಳ್ಳಿ ಠಾಣೆಯ ನಾಲ್ವರು ಕ್ರೈಂ ಸಿಬ್ಬಂದಿ ವಿರುದ್ಧ ಆರೋಪಿಸಿ ಸುದರ್ಶನ್ ದೂರು ದಾಖಲಿಸಿದ್ದಾರೆ. ಆದ್ರೆ ಘಟನಾ ದಿನವೇ ಅಮೃತಹಳ್ಳಿ ಪೊಲೀಸರು ಸುದರ್ಶನ್ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಸದ್ಯ ಸುದರ್ಶನ್ ದೂರಿನನ್ವಯ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Breaking : ಆಸ್ಪತ್ರೆಯಿಂದ ಹೊರಬಂದ ಎರಡು ದಿನಗಳ ನಂತರ ವಿಚಾರಣೆ ಮಾಡುವಂತೆ ಸೋನಿಯಾ ಮನವಿ

ಪ್ರೇಮ ವಿವಾಹಕ್ಕೆ ಬೆಂಬಲ ನೀಡಿದಕ್ಕೆ ಥಳಿತ ಪ್ರೇಮ ವಿವಾಹ ವಿಚಾರಕ್ಕೆ ಬೆಂಬಲ ನೀಡಿದ ಯುವಕನಿಗೆ ಕಾಂಗ್ರೆಸ್ ಮುಖಂಡ ಥಳಿಸಿರುವ ಆರೋಪ ಕೇಳಿ ಬಂದಿದೆ. ಮೆಹಬೂಬ್ ಬಾಷ ಎಂಬ ಯುವಕನಿಗೆ ಪಾವಗಡ ಕಾಂಗ್ರೆಸ್ ನಗರಾಧ್ಯಕ್ಷ ಸುರೇಶ್ ಬಾಬು ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು ಪಾವಗಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾವಗಡ ಪಟ್ಟಣದಲ್ಲಿ ಇತ್ತೀಚೆಗೆ ಬೇರೆ ಬೇರೆ ಜಾತಿಯ ಹುಡುಗ ಹುಡುಗಿ ಮದುವೆಯಾಗಿದ್ದರು. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆ ಮೇಟ್ಟೇಲೆರಿದ್ದ ಪೋಷಕರು. ಬಳಿಕ‌ ಇಬ್ಬರು ಮೇಜರ್ ಆಗಿದ್ದ ಹಿನ್ನೆಲೆ ಪ್ರಕರಣ ಇತ್ಯರ್ಥವಾಗಿತ್ತು. ಆದರೆ ಇದಕ್ಕೆ ಬೆಂಬಲ ನೀಡಿದ ಆರೋಪದಡಿ ಹುಡುಗನ ಸ್ನೇಹಿತನ ಕರೆಸಿ ಹಲ್ಲೆ ಮಾಡಲಾಗಿದೆ. ತಡರಾತ್ರಿ ಪಾವಗಡ ಕಾಂಗ್ರೆಸ್ ಕಚೇರಿಗೆ ಮಾತನಾಡಬೇಕೆಂದು ಬಾ ಎಂದು ಕರೆಸಿ ಹಲ್ಲೆ ಮಾಡಿರುವ ಆರೋಪ. ಸುರೇಶ್ ಬಾಬು ಬೆಂಬಲಿಗರು ಹಾಗೂ ವೈಎನ್ ಹೊಸಕೋಟೆ ಎಎಸ್ ಐ ಮಗನೋರ್ವ ಕಬ್ಬಿಣದ ಕುರ್ಚಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:44 pm, Wed, 22 June 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು