AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಹಿಂದೂಗಳಾದ ನಮ್ಮ ವಿರುದ್ಧ ಸಮರ ಸಾರಿದ್ದಾರೆ. ಸನಾತನ ಧರ್ಮವನ್ನು ನಾಶಮಾಡಲು ಹೊರಟಿರುವವರಿಂದ ಪ್ರತಿಭಟಿಸಲು ಮತ್ತು ರಕ್ಷಿಸಲು ನಾವು ಒಗ್ಗೂಡುವ ಸಮಯ ಬಂದಿದೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದ ಸಿ,ಟಿ.ರವಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ದೂರು ದಾಖಲಿಸಿದೆ.

ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್
ಸಿಟಿ ರವಿ
ಆಯೇಷಾ ಬಾನು
|

Updated on:Mar 22, 2024 | 7:39 AM

Share

ಬೆಂಗಳೂರು, ಮಾರ್ಚ್.22: ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹುಟ್ಟುಹಾಕಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. ಸಿ.ಟಿ. ರವಿ (CT Ravi) ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ದ್ವೇಷ ಹುಟ್ಟುಹಾಕುವ ಪೋಸ್ಟ್ ಹಾಕಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿಯೊಬ್ಬರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.

ಸಿ.ಟಿ.ರವಿ ಅವರು ಎಕ್ಸ್ ನಲ್ಲಿ, ” ಸಾಗರದ ಆಳವನ್ನಾದರೂ ಅಳೆಯಬಹುದು, ಆದರೆ ರಾಹುಲ್ ಗಾಂಧಿ ಮನಸಿನಲ್ಲಿ ಹಿಂದೂಗಳು ಮತ್ತು ಹಿಂಧೂ ಧರ್ಮದ ಬಗ್ಗೆ ಇರುವ ದ್ವೇಷವನ್ನು ಅಳೆಯಲಾಗದು. ರಾಹುಲ್ ಗಾಂಧಿ ಅವರು, ಶಕ್ತಿ ವಿರುದ್ಧ ನಮ್ಮ ಹೋರಾಟ ಎಂದಿದ್ದಾರೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬುದಕ್ಕೆ ವಿಶೇಷ ಅರ್ಥ, ಗೌರವ ಇದೆ, ಇದರ ವಿರುದ್ಧ ಹೋರಾಟ ಮಾಡುವವರು, ಹಿಂದೂ ಧರ್ಮದ ವಿರೋಧಿಗಳು”

”ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಹಿಂದೂಗಳಾದ ನಮ್ಮ ವಿರುದ್ಧ ಸಮರ ಸಾರಿದ್ದಾರೆ. ಸನಾತನ ಧರ್ಮವನ್ನು ನಾಶಮಾಡಲು ಹೊರಟಿರುವವರಿಂದ ಪ್ರತಿಭಟಿಸಲು ಮತ್ತು ರಕ್ಷಿಸಲು ನಾವು ಒಗ್ಗೂಡುವ ಸಮಯ ಬಂದಿದೆ” ಎಂದು ಬರೆದುಕೊಂಡಿದ್ದರು.

ಸಿ.ಟಿ. ರವಿ ಪೋಸ್ಟ್

ಇದನ್ನೂ ಓದಿ: ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಚಿವರ ಮಕ್ಕಳಿಗೆ ಮಣೆ

ಇದನ್ನು ಗಮನಿಸಿದ ಚುನಾವಣಾ ಆಯೋಗ ಈ ಬರಹ ನೀತಿ ಸಂಹಿತೆಯಡಿಯಲ್ಲಿ ಧ್ವೇಷ ಕಾರುವ ಹೇಳಿಕೆಯಾಗಿದ್ದು, ಹೇಳಿಕೆ ವಿರುದ್ಧ ದೂರು ದಾಖಲಿಸಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.

ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ 126, ಎಫ್‌ಐಆರ್‌ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, “ಕಾಂಗ್ರೆಸ್ ನನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ ವಿವರಗಳನ್ನು ನಾನು ಸ್ವೀಕರಿಸಿದ್ದೇನೆ. ಸನಾತನಿಯಾಗಿ ನಾನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಬೇಜವಾಬ್ದಾರಿ ಮತ್ತು ಸಂವೇದನಾರಹಿತ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ್ದೇನೆ.

ಸನಾತನ ಧರ್ಮವನ್ನು ಅನುಸರಿಸುವವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಹೇಳಿಕೆಗಳಿಗಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ನ ವಿವರಗಳನ್ನು ಚುನಾವಣಾ ಆಯೋಗವು ಹಂಚಿಕೊಂಡರೆ ಅದನ್ನು ನಾನು ಪ್ರಶಂಸಿಸುತ್ತೇನೆ ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:27 am, Fri, 22 March 24

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​