AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ FIR

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ಆರೋಪ ಸಂಬಂಧ ಡಿವೈಎಸ್​ಪಿ ಶಾಂತಕುಮಾರ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಡುಗೋಡಿ ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ಹಾಕಲಾಗಿದ್ದ ಕಸವನ್ನು ಕೆಲಸದವರಿಂದ ತೆಗೆಸುವಂತೆ ಹೇಳಿದ್ದಕ್ಕೆ ಜಗಳ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಮಾಡಲಾಗಿದೆ.

ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ FIR
ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ FIR (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Jan 08, 2024 | 10:44 PM

Share

ಬೆಂಗಳೂರು, ಜ.8: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ಆರೋಪ ಸಂಬಂಧ ಡಿವೈಎಸ್​ಪಿ ಶಾಂತಕುಮಾರ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಬೆಂಗಳೂರು (Bengaluru) ನಗರದ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಡುಗೋಡಿ ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ವಾಸವಿರುವ ವಿದ್ಯಾ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಡಿವೈಎಸ್​ಪಿ ಶಾಂತಕುಮಾರ್, ಪತ್ನಿ ಲಕ್ಷ್ಮಿಕಾಂತ, ಮಕ್ಕಳಾದ ಮಹೇಶ್ ಹಾಗೂ ಸಾಯಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ವಾಸವಿರುವ ವಿದ್ಯಾ ಅವರು ಜನವರಿ 7 ರಂದು ಬೆಳಗ್ಗೆ ವಾಕಿಂಗ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಆವರಣದಲ್ಲಿ ತೆಂಗಿನ ಕಾಯಿ, ನಿಂಬೆ ಹಣ್ಣು, ಬೂದು ಕುಂಬಳಕಾಯಿ ಒಡೆದು ಹಾಕಲಾಗಿತ್ತು.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಇದನ್ನು ನೋಡಿದ ವಿದ್ಯಾ ಅವರು ಕಸ ಗುಡಿಸುವವರ ಬಳಿ ಕ್ಲೀನ್ ಮಾಡುವಂತೆ ಹೇಳಿದಾಗ ಲಕ್ಷ್ಮಿಕಾಂತ ಅವರು ವಿನಾಕಾರಣ ಜಗಳ ತೆಗೆದಿದ್ದಾರೆ. ಈ ವೇಳೆ ಪತ್ನಿಯ (ಲಕ್ಷ್ಮಿ ಕಾಂತ) ಸಹಾಯಕ್ಕೆ ಶಾಂತಕುಮಾರ್ ಹಾಗೂ ಮಕ್ಕಳು ಆಗಮಿಸಿದ್ದಾರೆ. ಬಳಿಕ ವಿದ್ಯಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ಆರೋಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA