ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ FIR

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ಆರೋಪ ಸಂಬಂಧ ಡಿವೈಎಸ್​ಪಿ ಶಾಂತಕುಮಾರ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಡುಗೋಡಿ ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ಹಾಕಲಾಗಿದ್ದ ಕಸವನ್ನು ಕೆಲಸದವರಿಂದ ತೆಗೆಸುವಂತೆ ಹೇಳಿದ್ದಕ್ಕೆ ಜಗಳ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಮಾಡಲಾಗಿದೆ.

ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ FIR
ಕಸ ತೆಗೆಸುವಂತೆ ಹೇಳಿದ್ದಕ್ಕೆ ಜಗಳ, ನಿಂದನೆ: ಡಿವೈಎಸ್​ಪಿ ಶಾಂತಕುಮಾರ್ ಮತ್ತು ಕುಟುಂಬಸ್ಥರ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ FIR (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jan 08, 2024 | 10:44 PM

ಬೆಂಗಳೂರು, ಜ.8: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ಆರೋಪ ಸಂಬಂಧ ಡಿವೈಎಸ್​ಪಿ ಶಾಂತಕುಮಾರ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಬೆಂಗಳೂರು (Bengaluru) ನಗರದ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಡುಗೋಡಿ ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ವಾಸವಿರುವ ವಿದ್ಯಾ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಡಿವೈಎಸ್​ಪಿ ಶಾಂತಕುಮಾರ್, ಪತ್ನಿ ಲಕ್ಷ್ಮಿಕಾಂತ, ಮಕ್ಕಳಾದ ಮಹೇಶ್ ಹಾಗೂ ಸಾಯಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾವೇರಿ ಪೊಲೀಸ್ ಸಂಕೀರ್ಣದಲ್ಲಿ ವಾಸವಿರುವ ವಿದ್ಯಾ ಅವರು ಜನವರಿ 7 ರಂದು ಬೆಳಗ್ಗೆ ವಾಕಿಂಗ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಆವರಣದಲ್ಲಿ ತೆಂಗಿನ ಕಾಯಿ, ನಿಂಬೆ ಹಣ್ಣು, ಬೂದು ಕುಂಬಳಕಾಯಿ ಒಡೆದು ಹಾಕಲಾಗಿತ್ತು.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಇದನ್ನು ನೋಡಿದ ವಿದ್ಯಾ ಅವರು ಕಸ ಗುಡಿಸುವವರ ಬಳಿ ಕ್ಲೀನ್ ಮಾಡುವಂತೆ ಹೇಳಿದಾಗ ಲಕ್ಷ್ಮಿಕಾಂತ ಅವರು ವಿನಾಕಾರಣ ಜಗಳ ತೆಗೆದಿದ್ದಾರೆ. ಈ ವೇಳೆ ಪತ್ನಿಯ (ಲಕ್ಷ್ಮಿ ಕಾಂತ) ಸಹಾಯಕ್ಕೆ ಶಾಂತಕುಮಾರ್ ಹಾಗೂ ಮಕ್ಕಳು ಆಗಮಿಸಿದ್ದಾರೆ. ಬಳಿಕ ವಿದ್ಯಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ಆರೋಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us