AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ FIR; ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆಕ್ರೋಶ

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆರ್.ಅಶೋಕ್​ ಆಕ್ರೋಶ ಹೊರ ಹಾಕಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ FIR; ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆಕ್ರೋಶ
ಆರ್.ಅಶೋಕ್
ಕಿರಣ್​ ಹನಿಯಡ್ಕ
| Edited By: ಆಯೇಷಾ ಬಾನು|

Updated on: Sep 19, 2024 | 12:23 PM

Share

ಬೆಂಗಳೂರು, ಸೆ.19: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್​ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್​​ (R Ashok) ವಿರುದ್ಧ FIR ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಆರ್ ಅಶೋಕ್ ಅವರು ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ. ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ನಾನು ಹೋಗಿದ್ದಾಗ ಜನರು ಹೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಎಂದು ಕೂಗಿಲ್ಲ ಎಂದರು. ಹಾಗಾದರೆ ನಿಮ್ಮ ಮೇಲೆ ಯಾಕೆ FIR ಹಾಕಬಾರದು? ವಿಪಕ್ಷ ನಾಯಕನಾಗಿ ತನಿಖೆ ಮಾಡಿ ಅಂತಾನೂ ಹೇಳಬಾರದ? ಬಾಯಿ ಮುಚ್ಚಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಪಕ್ಷ ಬಾಯಿ ಮುಚ್ಚಿಸಬೇಕು ಅಂತಾ ಇವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: D Kempanna Death: ಡಿ ಕೆಂಪಣ್ಣ ನಿಧನ: ಕಾಂಗ್ರೆಸ್​ ‘ಪೇ ಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಇನ್ನಿಲ್ಲ

ಕರ್ನಾಟಕದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಈ ಬಗ್ಗೆ ಹೋರಾಟ ಮಾಡಲು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಾಗಿದೆ. ರಾಜ್ಯಪಾಲರ ಮೇಲೂ ಕಾಂಗ್ರೆಸ್ಸಿಗರು ಗದಾಪ್ರಹಾರ ಮಾಡುತ್ತಿದ್ದಾರೆ. ವಿವಿಗಳಲ್ಲಿ ರಾಜ್ಯಪಾಲರ ಅಧಿಕಾರ ಕಸಿಯುವ ಪ್ರಯತ್ನ ಮಾಡ್ತಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆರ್.ಅಶೋಕ್​ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ಎಫ್​ಐಆರ್

ಇನ್ನು ಮತ್ತೊಂದೆಡೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಉಗ್ರ ಎಂದು ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕೆಪಿಸಿಸಿ ಲೀಗಲ್ ಸೆಲ್​ನಿಂದ ದೂರು ದಾಖಲಾಗಿದೆ. ಅಮೆರಿಕ ಪ್ರವಾಸದ ವೇಳೆ ಭಾರತದಲ್ಲಿ ಸಿಖ್​ರ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ಆ ಬಾಂಬ್ ತಯಾರಕರು ರಾಹುಲ್​ರನ್ನು ಬೆಂಬಲಿಸುತ್ತಿದ್ದಾರೆ ಅಂದರೆ ಆತ ನಂಬರ್​ 1 ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ