AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಯತ್ನ, ಅವಾಚ್ಯ ಶಬ್ದಗಳಿಂದ ಇನ್ಸ್ಪೆಕ್ಟರ್​ಗೆ ಅವಾಜ್; ಪಿಎಸ್​ಐ ಅಭ್ಯರ್ಥಿ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು

ಪಿಎಸ್​ಐ (PSI) ಅಭ್ಯರ್ಥಿ ಜಗದೀಶ್​ ಎಂಬಾತ ಇನ್ಸ್ಪೆಕ್ಟರ್​ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಾಜ್ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಟ್ಟೆ ಬಿಚ್ಚಿಸ್ತಿನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಅವಾಜ್ ಹಾಕಿದ್ದಾನೆ.

ಹಲ್ಲೆ ಯತ್ನ, ಅವಾಚ್ಯ ಶಬ್ದಗಳಿಂದ ಇನ್ಸ್ಪೆಕ್ಟರ್​ಗೆ ಅವಾಜ್; ಪಿಎಸ್​ಐ ಅಭ್ಯರ್ಥಿ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Dec 16, 2023 | 9:06 AM

ಬೆಂಗಳೂರು, ಡಿ.16: ತಾನು ಪ್ರೀತಿಸಿದ ಮಹಿಳೆ ಬೇರೆಯವರೊಂದಿಗೆ ಸ್ನೇಹ ಬೆಳೆಸಿದ್ದಾಳೆ ಎಂದು ಮಹಿಳೆ ಮನೆ ಮುಂದೆ ಗಲಾಟೆ ಮಾಡುತ್ತಿದ್ದ ಪಿಎಸ್​ಐ (PSI) ಅಭ್ಯರ್ಥಿ ಜಗದೀಶ್​ ಎಂಬಾತನನ್ನು ಸಮಾಲಿಸಲು ಬಂದ ಇನ್ಸ್ಪೆಕ್ಟರ್​ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಾಜ್ ಹಾಕಿದ ಘಟನೆ ನಡೆದಿದೆ. ಬಟ್ಟೆ ಬಿಚ್ಚಿಸ್ತಿನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಅವಾಜ್ ಹಾಕಿದ್ದಾನೆ. ಘಟನೆ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ (Girinagar Police Station) ಎಫ್ಐಆರ್ ದಾಖಲಾಗಿದೆ.

ಪಿಎಸ್ಐ ಪರೀಕ್ಷೆ ಬರೆದು ಫೇಲ್ ಆಗಿದ್ದ ಜಗದೀಶ್ ಎಂಬ ವ್ಯಕ್ತಿ ಮದುವೆ ಆದರೂ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಆ ಮಹಿಳೆ ಬೇರೆಯವರಿಗೆ ಮೆಸೇಜ್ ಮಾಡ್ತಿದಾಳೆಂದು ತಿಳಿಯುತ್ತಿದ್ದಂತೆ ಮಹಿಳೆ ಮನೆ ಮುಂದೆ ಬಂದು ಕಿರಿಕ್ ಮಾಡಿದ್ದ. ಇದನ್ನ ಗಮನಿಸಿದ ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಹೊಯ್ಸಳ ಬಂದು ಆತನನ್ನ ಕರೆದೊಯ್ಯುವಾಗ ಎಎಸ್​ಐ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಇನ್ಸ್ಪೆಕ್ಟರ್ ಸಂದೀಪ್ ಸ್ಥಳಕ್ಕೆ ಬರುತ್ತಿದ್ದಂತೆ ಅವಾಚ್ಯ ಶಬ್ಧದಿಂದ ನಿಂದಿಸಿದ್ದಾನೆ.

ಇದನ್ನೂ ಓದಿ: ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಆಕಸ್ಮಿಕವಾಗಿ ಹತ್ಯೆಗೈದ ಇಸ್ರೇಲ್ ಸೇನೆ, ನೇತನ್ಯಾಹು ಹೇಳಿದ್ದೇನು?

ಏನೂ ಕಿತ್ಕೋಳೋಕಾಗಲ್ಲ ಎಂಬಂತಹ ಕೀಳು ಪದ ಬಳಸಿ ಜಗದೀಶ್ ಇನ್ಸ್ಪೆಕ್ಟರ್​ಗೆ ನಿಂದಿಸಿದ್ದಾನೆ. ಸಮಾಧಾನ ಮಾಡಲು ಹೋದರೂ ಹಲ್ಲೆ, ನಿಂದನೆ ಮಾಡಿದ್ದಾನೆ. ಬಟ್ಟೆ ಬಿಚ್ಚಿಸ್ತೀನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ. ನೀನು ತ್ರಿಬಲ್ ಸ್ಟಾರ್ ಅಷ್ಟೇ, ನನಗೆ ಅರ್ಧ ಮಾರ್ಕ್​ನಿಂದ ಪಿಎಸ್​ಐ ಎಕ್ಸಾಂ ಹೋಯ್ತು. ನನ್ ಕೈಲಿ ರಿವಾಲ್ವರ್ ಇದ್ದಿದ್ರೆ ಕಥೆನೇ ಬೇರೆ ಇರ್ತಿತ್ತು. ನಿನಗೆ ಹ್ಯೂಮನ್ ರೈಟ್ಸ್ ಅವರು ಗೊತ್ತಾ? ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕ್ತೀನಿ. 500-1000 ತಗೊಂಡು ಕೆಲಸ ಮಾಡ್ತಿರಾ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಬೆದರಿಕೆ ಹಾಕಿದ್ದಾನೆ. ಸದ್ಯ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಹಿನ್ನಲೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?