AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಯತ್ನ, ಅವಾಚ್ಯ ಶಬ್ದಗಳಿಂದ ಇನ್ಸ್ಪೆಕ್ಟರ್​ಗೆ ಅವಾಜ್; ಪಿಎಸ್​ಐ ಅಭ್ಯರ್ಥಿ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು

ಪಿಎಸ್​ಐ (PSI) ಅಭ್ಯರ್ಥಿ ಜಗದೀಶ್​ ಎಂಬಾತ ಇನ್ಸ್ಪೆಕ್ಟರ್​ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಾಜ್ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಟ್ಟೆ ಬಿಚ್ಚಿಸ್ತಿನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಅವಾಜ್ ಹಾಕಿದ್ದಾನೆ.

ಹಲ್ಲೆ ಯತ್ನ, ಅವಾಚ್ಯ ಶಬ್ದಗಳಿಂದ ಇನ್ಸ್ಪೆಕ್ಟರ್​ಗೆ ಅವಾಜ್; ಪಿಎಸ್​ಐ ಅಭ್ಯರ್ಥಿ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 16, 2023 | 9:06 AM

Share

ಬೆಂಗಳೂರು, ಡಿ.16: ತಾನು ಪ್ರೀತಿಸಿದ ಮಹಿಳೆ ಬೇರೆಯವರೊಂದಿಗೆ ಸ್ನೇಹ ಬೆಳೆಸಿದ್ದಾಳೆ ಎಂದು ಮಹಿಳೆ ಮನೆ ಮುಂದೆ ಗಲಾಟೆ ಮಾಡುತ್ತಿದ್ದ ಪಿಎಸ್​ಐ (PSI) ಅಭ್ಯರ್ಥಿ ಜಗದೀಶ್​ ಎಂಬಾತನನ್ನು ಸಮಾಲಿಸಲು ಬಂದ ಇನ್ಸ್ಪೆಕ್ಟರ್​ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಾಜ್ ಹಾಕಿದ ಘಟನೆ ನಡೆದಿದೆ. ಬಟ್ಟೆ ಬಿಚ್ಚಿಸ್ತಿನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಅವಾಜ್ ಹಾಕಿದ್ದಾನೆ. ಘಟನೆ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ (Girinagar Police Station) ಎಫ್ಐಆರ್ ದಾಖಲಾಗಿದೆ.

ಪಿಎಸ್ಐ ಪರೀಕ್ಷೆ ಬರೆದು ಫೇಲ್ ಆಗಿದ್ದ ಜಗದೀಶ್ ಎಂಬ ವ್ಯಕ್ತಿ ಮದುವೆ ಆದರೂ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಆ ಮಹಿಳೆ ಬೇರೆಯವರಿಗೆ ಮೆಸೇಜ್ ಮಾಡ್ತಿದಾಳೆಂದು ತಿಳಿಯುತ್ತಿದ್ದಂತೆ ಮಹಿಳೆ ಮನೆ ಮುಂದೆ ಬಂದು ಕಿರಿಕ್ ಮಾಡಿದ್ದ. ಇದನ್ನ ಗಮನಿಸಿದ ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಹೊಯ್ಸಳ ಬಂದು ಆತನನ್ನ ಕರೆದೊಯ್ಯುವಾಗ ಎಎಸ್​ಐ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಇನ್ಸ್ಪೆಕ್ಟರ್ ಸಂದೀಪ್ ಸ್ಥಳಕ್ಕೆ ಬರುತ್ತಿದ್ದಂತೆ ಅವಾಚ್ಯ ಶಬ್ಧದಿಂದ ನಿಂದಿಸಿದ್ದಾನೆ.

ಇದನ್ನೂ ಓದಿ: ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಆಕಸ್ಮಿಕವಾಗಿ ಹತ್ಯೆಗೈದ ಇಸ್ರೇಲ್ ಸೇನೆ, ನೇತನ್ಯಾಹು ಹೇಳಿದ್ದೇನು?

ಏನೂ ಕಿತ್ಕೋಳೋಕಾಗಲ್ಲ ಎಂಬಂತಹ ಕೀಳು ಪದ ಬಳಸಿ ಜಗದೀಶ್ ಇನ್ಸ್ಪೆಕ್ಟರ್​ಗೆ ನಿಂದಿಸಿದ್ದಾನೆ. ಸಮಾಧಾನ ಮಾಡಲು ಹೋದರೂ ಹಲ್ಲೆ, ನಿಂದನೆ ಮಾಡಿದ್ದಾನೆ. ಬಟ್ಟೆ ಬಿಚ್ಚಿಸ್ತೀನಿ ಹುಡುಗರನ್ನ ಕರೆ ತಂದು ಘೇರಾವ್ ಹಾಕ್ತಿನಿ. ನೀನು ತ್ರಿಬಲ್ ಸ್ಟಾರ್ ಅಷ್ಟೇ, ನನಗೆ ಅರ್ಧ ಮಾರ್ಕ್​ನಿಂದ ಪಿಎಸ್​ಐ ಎಕ್ಸಾಂ ಹೋಯ್ತು. ನನ್ ಕೈಲಿ ರಿವಾಲ್ವರ್ ಇದ್ದಿದ್ರೆ ಕಥೆನೇ ಬೇರೆ ಇರ್ತಿತ್ತು. ನಿನಗೆ ಹ್ಯೂಮನ್ ರೈಟ್ಸ್ ಅವರು ಗೊತ್ತಾ? ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕ್ತೀನಿ. 500-1000 ತಗೊಂಡು ಕೆಲಸ ಮಾಡ್ತಿರಾ ಎಂದು ಜಗದೀಶ್ ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಬೆದರಿಕೆ ಹಾಕಿದ್ದಾನೆ. ಸದ್ಯ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಹಿನ್ನಲೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​