AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ವಂಚನೆ; ಮೂರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

ಪಾಲಿಕೆಗೆ ಪ್ರತಿ ತಿಂಗಳು ಹತ್ತಾರು ಲಕ್ಷ ರೂ.ಗಳನ್ನು ವಂಚಿಸುತ್ತಿದ್ದ ಬಗ್ಗೆ ದಾಖಲೆಗಳ ಸಹಿತ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ವ್ಯವಸ್ಥಾಪಕ ವಿನಯ್ ಬಾಬು ದೂರು ನೀಡಿದ್ದು ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ವಂಚನೆ; ಮೂರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು
ಬಿಬಿಎಂಪಿ
TV9 Web
| Edited By: ಆಯೇಷಾ ಬಾನು|

Updated on: Jan 24, 2022 | 1:27 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಸಾರಿಗೆ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತ ರಮೇಶ್, ಕಂಪ್ಯೂಟರ್ ಆಪರೇಟರ್ ಸತೀಶ್, ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕ ಶಿವಾನಂದ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಪಾಲಿಕೆಗೆ ವಂಚನೆ ಸಂಬಂಧ ದೂರು ದಾಖಲಿಸಲಾಗಿದೆ. ಹಿಂದೆ ಪಾಲಿಕೆಯ ಅಧಿಕಾರಿಗಳ ಬಳಕೆಗೆಂದು ಗುತ್ತಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸುತ್ತಿದ್ದ ಟ್ರಾವೆಲ್ಸ್ ಗಳ ಪೈಕಿ ಒಂದಾಗಿರುವ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆ ತನ್ನ ಸಿಬ್ಬಂದಿಗೆ ಪಾವತಿಸುತ್ತಿದ್ದ PF, ESI ದಾಖಲೆ ನಕಲು ಮಾಡಿದೆ. ಆ ಸಂಸ್ಥೆಯು ಪಾಲಿಕೆಗೆ ನಿಡುತ್ತಿದ್ದ ಕಡತಗಳಿಂದ ತೆಗೆದು, ಅವುಗಳನ್ನೇ ನಕಲು ಮಾಡಿಕೊಂಡು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಎಂಬ ಹೆಸರಿನಲ್ಲಿ ಕಡತಗಳನ್ನು ತಯಾರು ಮಾಡಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಪಾಲಿಕೆಗೆ ಪ್ರತಿ ತಿಂಗಳು ಹತ್ತಾರು ಲಕ್ಷ ರೂ.ಗಳನ್ನು ವಂಚಿಸುತ್ತಿದ್ದ ಬಗ್ಗೆ ದಾಖಲೆಗಳ ಸಹಿತ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ವ್ಯವಸ್ಥಾಪಕ ವಿನಯ್ ಬಾಬು ದೂರು ನೀಡಿದ್ದು ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ. IPC 1860 ( U/S 34, 120 B, 420, 465, 468, 471) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ:  UP Diwas 2022: ಉತ್ತರ ಪ್ರದೇಶ ಜನರಿಗೆ ರಾಷ್ಟ್ರಪತಿ, ಗೃಹ ಸಚಿವರಿಂದ ಶುಭಾಶಯ; ಸಿಎಂ ಯೋಗಿ ವಿಡಿಯೋ ಶೇರ್​ ಮಾಡಿದ ಪ್ರಧಾನಿ ಮೋದಿ

Follow Us
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ