Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಿಕವರಿ ಚಿನ್ನ ದುರ್ಬಳಕೆ ಮತ್ತು ಚಿನ್ನದ ವ್ಯಾಪಾರಿಗೆ ವಂಚನೆ, ಪಿಎಸ್​ಐ ಅಮಾನತು

ಬೆಂಗಳೂರಿನ ಕಾಟನ್‌ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅವರನ್ನು ಚಿನ್ನದ ದುರ್ಬಳಕೆ ಮತ್ತು ವಂಚನೆ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. 2020ರಲ್ಲಿ ಹಲಸೂರು ಗೇಟ್ ಠಾಣೆಯಲ್ಲಿದ್ದಾಗ ರಿಕವರಿ ಚಿನ್ನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಚಿನ್ನದ ವ್ಯಾಪಾರಿಯಿಂದ 950 ಗ್ರಾಂ ಚಿನ್ನ ಪಡೆದು ವಾಪಸ್‌ ನೀಡದೆ ವಂಚಿಸಿದ್ದಾರೆ. ಪರಿಣಾಮವಾಗಿ ಎಫ್‌ಐಆರ್ ದಾಖಲಾಗಿ ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ರಿಕವರಿ ಚಿನ್ನ ದುರ್ಬಳಕೆ ಮತ್ತು ಚಿನ್ನದ ವ್ಯಾಪಾರಿಗೆ ವಂಚನೆ, ಪಿಎಸ್​ಐ ಅಮಾನತು
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Mar 23, 2025 | 10:34 AM

ಬೆಂಗಳೂರು, ಮಾರ್ಚ್ 23: ರಿಕವರಿ ಚಿನ್ನ (Gold) ದುರ್ಬಳಕೆ ಮತ್ತು ಚಿನ್ನದ ವ್ಯಾಪಾರಿಗೆ (Gold Merchant) ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್​​ಪೇಟೆ ಠಾಣೆ ಪಿಎಸ್​ಐ ಸಂತೋಷ್ ವಿರುದ್ಧ ಎಫ್​​ಐಆರ್​​​ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್​ ಆಯುಕ್ತರು ಅಮಾನತು ಮಾಡಿದ್ದಾರೆ.

2020ರಲ್ಲಿ ಹಲಸೂರು ಗೇಟ್ ಠಾಣೆ ಪಿಎಸ್​ಆರ್ ಆಗಿದ್ದ ಸಂತೋಷ್ ಅವರು ಪ್ರಕರಣವೊಂದರ ರಿಕವರಿ ಚಿನ್ನ ದುರ್ಬಳಕೆ ಮಾಡಿಕೊಂಡಿದ್ದರು. ಹೀಗಾಗಿ, ಚಿನ್ನದ ಅಂಗಡಿ ಮಾಲೀಕನ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ. ಫೋಟೋ ತೆಗೆಸಿ ವಾಪಸ್ ಕೊಡುತ್ತೇನೆ. ನಿನ್ನ ಬಳಿ ಇರುವ950 ಗ್ರಾಂ ಚಿನ್ನದ ಗಟ್ಟಿ ನೀಡುವಂತೆ ಪಿಎಸ್​ಐ ಸಂತೋಷ ಚಿನ್ನದಂಗಡೆ ಮಾಲೀಕನಿಗೆ ಹೇಳಿದ್ದಾರೆ.

ಮಾತು ನಂಬಿ 950 ಗ್ರಾಂ ಚಿನ್ನದ ಗಟ್ಟಿ‌ಯನ್ನು ಪಿಎಸ್​ಐ ಸಂತೋಷ ಅವರಿಗೆ ಚಿನ್ನದ ಅಂಗಡಿ ಮಾಲೀಕ ನೀಡಿದ್ದಾರೆ. ಚಿನ್ನ ವಾಪಸ್ ಕೇಳಿದಾಗ ಪಿಎಸ್​ಐ ಸಂತೋಷ ಹಣ ನೀಡುತ್ತೇನೆಂದು ಹೇಳಿದ್ದು, ಭದ್ರತೆಗೆ ನಿವೇಶನ​ ಕರಾರು ಮಾಡಿಕೊಟ್ಟಿದ್ದರು.

ಆದರೆ, ನಿವೇಶನವನ್ನು ಪಿಎಸ್​ಐ ಸಂತೋಷ್ ಬೇರೆಯವರಿಗೆ ಮಾರಿದ್ದರು. ಈ ಹಿನ್ನೆಲೆಯಲ್ಲಿ ಚಿನ್ನದ ಅಂಗಡಿ ಮಾಲೀಕ ಮತ್ತೆ ಪಿಎಸ್​ಐ ಸಂತೋಷರನ್ನು ಪ್ರಶ್ನಿಸಿದ್ದಾರೆ. ಆಗ, ಪಿಎಸ್​ಐ ಸಂತೋಷ ಚಿನ್ನದ ಅಂಗಡಿ ಮಾಲಿಕರಿಗೆ ಖಾಲಿ ಚೆಕ್ ನೀಡಿದ್ದರು. ಆದರೆ, ಚೆಕ್​ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಪಿಎಸ್ಐ ಸಂತೋಷ್ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಚಿನ್ನದ ಅಂಗಡಿ ಮಾಲೀಕ ಪಶ್ಚಿಮ ವಿಭಾಗ ಡಿಸಿಪಿಗೆ ದೂರು‌ ನೀಡಿದ್ದರು. ಎಸಿಪಿ ನೇತೃತ್ವದಲ್ಲಿ ಪ್ರಾಥಮಿಕ‌ ವಿಚಾರಣೆ ನಡೆಸಿ ವರದಿ ಸಲ್ಲಿಕೆಯಾಗಿದೆ. ಪ್ರಾಥಮಿಕ ವರದಿ ಆಧಾರದ ಮೇಲೆ ಪಿಎಸ್​ಐ ಮೇಲೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್​ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಿನ್ನ ಗಣಿಗಾರಿಕೆ: ಮಂಗಳಗಟ್ಟಿ ರೈತರಲ್ಲಿ ಆತಂಕ

ಎಫ್​ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್​ಐ ಸಂತೋಷ್​ರನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ದಯಾನಂದ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Sun, 23 March 25

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ