AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zameer Ahmed: ಶಾಸಕ ಜಮೀರ್ ಅಹ್ಮದ್ ವಿರುದ್ಧ ಭೂಕಬಳಿಕೆ ಆರೋಪ; ಎಫ್​ಐಆರ್​​ ದಾಖಲು

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹಾಗೂ ಕುಟುಂಬಸ್ಥರ ವಿರುದ್ಧ ಭೂಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. ಪ್ರಕರಣದ ಕುರಿತ ವಿವರ ಇಲ್ಲಿದೆ.

Zameer Ahmed: ಶಾಸಕ ಜಮೀರ್ ಅಹ್ಮದ್ ವಿರುದ್ಧ ಭೂಕಬಳಿಕೆ ಆರೋಪ; ಎಫ್​ಐಆರ್​​ ದಾಖಲು
ಶಾಸಕ ಜಮೀರ್ ಅಹ್ಮದ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 20, 2022 | 3:22 PM

Share

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಕುಟುಂಬಸ್ಥರ ವಿರುದ್ಧ ಭೂಕಬಳಿಕೆ ಆರೋಪ ಎದುರಾಗಿದ್ದು, ಬೆಂಗಳೂರಿನ ಸಂಪಿಗೇಹಳ್ಳಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಜಮೀರ್ ಅಹ್ಮದ್ ಹಾಗೂ ಸಹೋದರರ ವಿರುದ್ಧ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾ ಎಂಬುವವರು ನಿವೇಶನ ಕಬಳಿಕೆ ಯತ್ನ ಆರೋಪದಡಿ ಕೋರ್ಟ್​ಗೆ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೋರ್ಟ್​ ಆದೇಶದಂತೆ ಜಮೀಲ್ ಅಹ್ಮದ್ (Zameel Ahmed), ಜಮೀರ್ ಅಹ್ಮದ್, ಅತೀಕ್ ಕಾವರ್, ನ್ಯಾಷನಲ್ ಟ್ರಾವೆಲ್ಸ್ (National Travels), ಇತರರ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

ಪ್ರಕರಣವೇನು?

2015 ರಲ್ಲಿ ಶಾಹೀತಾ ನಾಸೀನ್, ತಸೀಮಾ ಫಾತೀಮಾ ಜಮೀರ್ ಕುಟುಂಬಸ್ಥರಿಂದ ಚೊಕ್ಕನಹಳ್ಳಿ ಬಡಾವಣೆಯಲ್ಲಿ ಸೈಟ್ ಖರೀದಿಸಿದ್ದಾರೆಂದು ಉಲ್ಲೇಖಿಸಲಾಗಿದೆ. ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಅದನ್ನು ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ಉಲ್ಲೇಖಿಸಿದ್ದಾರೆ. ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್​ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್​ಗಳ ಕಬಳಿಕೆ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹಾಗೆಯೇ ಕಬಳಿಕೆ ಪ್ರಶ್ನಿಸಿದ್ದ ಶಾಹೀತಾ ನಾಸೀನ್ ಕುಟುಂಬಕ್ಕೆ ಜೀವಬೆದರಿಕೆ ಹಾಕಲಾಗಿದೆ ಎಂದೂ ಆರೋಪಿಸಲಾಗಿದೆ.

ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್ ಮಾಲಿಕರು ಕಳೆದ ವರ್ಷ ಕೋರ್ಟ್ ಮೊರೆಹೋಗಿದ್ದರು. ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಜತೆಗೆ ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಆದೇಶ ನೀಡಿತ್ತು. ಕೋರ್ಟ್ ನಿಂದ ತಡೆಯಾಜ್ಞೆ ತಂದರೂ, ಸೈಟ್ ಬಿಟ್ಟು ಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ.

ಪ್ರಸ್ತುತ ಸಂಪಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಜಮೀಲ್ ಅಹಮದ್, ಜಮೀರ್ ಅಹಮದ್, ಅತೀಕ್ ಕಾವರ್, ನ್ಯಾಷನಲ್ ಟ್ರಾವೆಲ್ಸ್ ಹಾಗೂ ಇತರರ ವಿರುದ್ದ ಎಫ್​ಐಆರ್ ದಾಖಲಿಸಲಾಗಿದೆ. ದೂರುದಾರರಿಂದ ಜಾಗ ಸಂಬಂಧಿತ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ನೀಡಿರುವ ಮಾಹಿತಿ ಇಲ್ಲಿದೆ:

ಇದನ್ನೂ ಓದಿ:

R Ashok: ‘ಅಸ್ಪೃಶ್ಯತೆ ಹೇಗಿರುತ್ತದೆ ಎಂಬ ಅರಿವಾಗಿದೆ’; ಗ್ರಾಮ ವಾಸ್ತವ್ಯದ ನಂತರ ಸಚಿವ ಆರ್ ಅಶೋಕ್ ಹೇಳಿಕೆ

ಹಿಜಾಬ್​​ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ನಟಿ ಝೈರಾ ವಾಸಿಂ​; ‘ದಂಗಲ್​’ ಬೆಡಗಿಯ ನಿಲುವು ಏನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?