AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಕಿರುಕುಳ ಆರೋಪ; ರವಿ ಡಿ.ಚನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್ ದಾಖಲು

ವಿವಾಹವಾದ ಒಂದೇ ವರ್ಷದಲ್ಲಿ ರೋಜಾರನ್ನು ಬಿಟ್ಟು, ಮೊದಲು ಮದುವೆಯಾಗಿದ್ದ ಮಹಿಳೆ ಜೊತೆ ಸಂಸಾರ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಹೀಗೆ ಮಾಡುತ್ತಾನೆ, ಎಲ್ಲಾ ಸರಿಹೋಗುತ್ತೆ.

ಪತ್ನಿಗೆ ಕಿರುಕುಳ ಆರೋಪ; ರವಿ ಡಿ.ಚನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್ ದಾಖಲು
ರವಿ ಡಿ ಚನ್ನಣ್ಣನವರ್
TV9 Web
| Edited By: |

Updated on:May 19, 2022 | 8:42 AM

Share

ಬೆಂಗಳೂರು: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ (Ravi D Channannavar ) ಸೋದರನ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 2015ರಲ್ಲಿ ರೋಜಾ ಮತ್ತು ರಾಘವೇಂದ್ರ ಡಿ.ಚೆನ್ನಣ್ಣನವರ್ ಮದುವೆಯಾಗಿತ್ತು. ರವಿ ಡಿ.ಚನ್ನಣ್ಣನವರ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆರೋಜಾ ಮದುವೆಗೂ ಮುನ್ನ ಮತ್ತೊಬ್ಬ ಮಹಿಳೆ ಜತೆ ಮದುವೆಯಾಗಿದ್ದನ್ನು ಬಚ್ಚಿಟ್ಟಿದ್ದ ಆರೋಪ ಕೇಳಿಬಂದಿದೆ.

ವಿವಾಹವಾದ ಒಂದೇ ವರ್ಷದಲ್ಲಿ ರೋಜಾರನ್ನು ಬಿಟ್ಟು, ಮೊದಲು ಮದುವೆಯಾಗಿದ್ದ ಮಹಿಳೆ ಜೊತೆ ಸಂಸಾರ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಹೀಗೆ ಮಾಡುತ್ತಾನೆ, ಎಲ್ಲಾ ಸರಿಹೋಗುತ್ತೆ. ನೀನು ಉನ್ನತ ಶಿಕ್ಷಣದ ಕಡೆ ಗಮನ ಹರಿಸು ಅಂತ ಹೇಳಿದ್ದರಂತೆ. ಸದ್ಯ ಇಬ್ಬರ ಜೊತೆಗೂ ಸಂಸಾರ ಮಾಡುವುದಾಗಿ ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಆದರೆ ನ್ಯಾಯ ಬೇಕೆಂದು ರೋಜಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Fact Check ಥೀಮ್ ಏನು? ಏನು ಹೇಳ್ಬೇಕು? ಎಂದು ರಾಹುಲ್ ಗಾಂಧಿ ಕೇಳುತ್ತಿರುವ ವಿಡಿಯೊ ಚಿಂತನ್ ಶಿವಿರ್​​ದ್ದು ಅಲ್ಲ

ಇದನ್ನೂ ಓದಿ
Image
ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್​: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ​​​​
Image
Madonna Sebastian: ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಕೇರಳ ಮೂಲದ ಮಡೋನ್ನ ಸೆಬಾಸ್ಟಿಯನ್; ‘ಕೋಟಿಗೊಬ್ಬ 3’ ನಟಿಯ ಕುತೂಹಲಕರ ವಿಚಾರಗಳು ಇಲ್ಲಿವೆ
Image
ಸೂಪರ್​ ಹೀರೋ ಆಗ್ತಾರೆ ಶಿವಣ್ಣ; ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್​ ನಿರ್ದೇಶನ
Image
Nathuram Godse: ನಾಥೂರಾಮ್ ವಿನಾಯಕ ಗೋಡ್ಸೆ ಜನ್ಮದಿನ: ನಿಮಗೆ ತಿಳಿಯದ ಕೆಲವು ಸಂಗತಿಗಳು

ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾರೆ. ಹಲವಾರು ಬಾರಿ ತಂದೆ ಬಳಿ ಹಣ ಪಡೆದಿದ್ದಾರೆ. ಈ ಮಧ್ಯೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ವಿಷಯವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರ ಗಮನಕ್ಕೂ ತಂದಿರುವೆ. ಆದರೆ ಅವರೂ ಹೊಸ ಹೆಂಡತಿಯ ಜೊತೆ ಹೊಂದಿಕೊಂಡು ಹೋಗು ಎಂದು ತನಗೆ ಹೇಳಿದ್ದಾಗಿ ರೋಜಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:36 am, Thu, 19 May 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!