AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ಮೂವರ ಮೇಲೆ ಕೆರಳದಲ್ಲಿ ಎಫ್​ಐಆರ್ ದಾಖಲಾದ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?
ಇನ್ಸ್​ಪೆಕ್ಟರ್ ಶಿಚಪ್ರಕಾಶ್
Jagadisha B
| Edited By: |

Updated on:Aug 03, 2023 | 12:46 PM

Share

ಬೆಂಗಳೂರು, ಆ.3: ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ನಾಲ್ವರ ಮೇಲೆ ಕೆರಳದಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​(Software Engineer)ಬಳಿ ಬರೊಬ್ಬರಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ದುಷ್ಕರ್ಮಿಗಳು ವಂಚನೆ ಮಾಡಿದ್ದರು. ಈ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಕೇರಳ ಹೋಗಿದ್ದರು.

ಆರೋಪಿಯನ್ನ ಬಂಧಿಸಲು ಹೋದ ಪೊಲೀಸರೇ ಅರೆಸ್ಟ್

ಮೊದಲಿಗೆ ಮಡಿಕೇರಿಯ ಆರೋಪಿ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಅಲ್ಲಿ ನೌಶಾದ್ ಎಂಬುವನಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಪರಾಧ ಮುಚ್ಚಿ ಹಾಕಲು ಇನ್ಸ್​ಪೆಕ್ಟರ್ ಶಿವಪ್ರಕಾಶ್​ಯಿಂದ ನೌಶಾದ್ ಬಳಿ 3 ಲಕ್ಷ ಬೇಡಿಕೆ ಆರೋಪ

ಇನ್ನು ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಪೊಲೀಸರಿಗೆ ಆರೋಪಿ ನೌಶಾದ್​ ಸಿಕ್ಕಿದ್ದ. ಈ ವೇಳೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಕೃತ್ಯ ಮುಚ್ಚಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಮುಂಗಡವಾಗಿ 3.95 ಲಕ್ಚ ಹಣವನ್ನ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಬೆಂಗಳೂರು ಪೊಲೀಸರು ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ತಿಳಿಸಿದ್ದರು. ಹೀಗಿದ್ದರೂ ಕಲ್ಲಂಚೇರಿ ಪೊಲೀಸರು ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು, ನಿನ್ನೆಯೇ ಎಫ್​ಐಆರ್ ದಾಖಲು ಮಾಡಿದ್ದರು. ಸದ್ಯಕ್ಕೆ ಕಲ್ಲಂಚೇರಿ ಪೊಲೀಸರು ವಶದಲ್ಲಿ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿಗಳು ಇದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Thu, 3 August 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ