AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ಮೂವರ ಮೇಲೆ ಕೆರಳದಲ್ಲಿ ಎಫ್​ಐಆರ್ ದಾಖಲಾದ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?
ಇನ್ಸ್​ಪೆಕ್ಟರ್ ಶಿಚಪ್ರಕಾಶ್
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 03, 2023 | 12:46 PM

Share

ಬೆಂಗಳೂರು, ಆ.3: ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ನಾಲ್ವರ ಮೇಲೆ ಕೆರಳದಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​(Software Engineer)ಬಳಿ ಬರೊಬ್ಬರಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ದುಷ್ಕರ್ಮಿಗಳು ವಂಚನೆ ಮಾಡಿದ್ದರು. ಈ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಕೇರಳ ಹೋಗಿದ್ದರು.

ಆರೋಪಿಯನ್ನ ಬಂಧಿಸಲು ಹೋದ ಪೊಲೀಸರೇ ಅರೆಸ್ಟ್

ಮೊದಲಿಗೆ ಮಡಿಕೇರಿಯ ಆರೋಪಿ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಅಲ್ಲಿ ನೌಶಾದ್ ಎಂಬುವನಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಪರಾಧ ಮುಚ್ಚಿ ಹಾಕಲು ಇನ್ಸ್​ಪೆಕ್ಟರ್ ಶಿವಪ್ರಕಾಶ್​ಯಿಂದ ನೌಶಾದ್ ಬಳಿ 3 ಲಕ್ಷ ಬೇಡಿಕೆ ಆರೋಪ

ಇನ್ನು ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಪೊಲೀಸರಿಗೆ ಆರೋಪಿ ನೌಶಾದ್​ ಸಿಕ್ಕಿದ್ದ. ಈ ವೇಳೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಕೃತ್ಯ ಮುಚ್ಚಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಮುಂಗಡವಾಗಿ 3.95 ಲಕ್ಚ ಹಣವನ್ನ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಬೆಂಗಳೂರು ಪೊಲೀಸರು ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ತಿಳಿಸಿದ್ದರು. ಹೀಗಿದ್ದರೂ ಕಲ್ಲಂಚೇರಿ ಪೊಲೀಸರು ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು, ನಿನ್ನೆಯೇ ಎಫ್​ಐಆರ್ ದಾಖಲು ಮಾಡಿದ್ದರು. ಸದ್ಯಕ್ಕೆ ಕಲ್ಲಂಚೇರಿ ಪೊಲೀಸರು ವಶದಲ್ಲಿ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿಗಳು ಇದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Thu, 3 August 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!