ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 03, 2023 | 12:46 PM

ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ಮೂವರ ಮೇಲೆ ಕೆರಳದಲ್ಲಿ ಎಫ್​ಐಆರ್ ದಾಖಲಾದ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?
ಇನ್ಸ್​ಪೆಕ್ಟರ್ ಶಿಚಪ್ರಕಾಶ್
Follow us on

ಬೆಂಗಳೂರು, ಆ.3: ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ನಾಲ್ವರ ಮೇಲೆ ಕೆರಳದಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​(Software Engineer)ಬಳಿ ಬರೊಬ್ಬರಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ದುಷ್ಕರ್ಮಿಗಳು ವಂಚನೆ ಮಾಡಿದ್ದರು. ಈ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಕೇರಳ ಹೋಗಿದ್ದರು.

ಆರೋಪಿಯನ್ನ ಬಂಧಿಸಲು ಹೋದ ಪೊಲೀಸರೇ ಅರೆಸ್ಟ್

ಮೊದಲಿಗೆ ಮಡಿಕೇರಿಯ ಆರೋಪಿ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಅಲ್ಲಿ ನೌಶಾದ್ ಎಂಬುವನಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಪರಾಧ ಮುಚ್ಚಿ ಹಾಕಲು ಇನ್ಸ್​ಪೆಕ್ಟರ್ ಶಿವಪ್ರಕಾಶ್​ಯಿಂದ ನೌಶಾದ್ ಬಳಿ 3 ಲಕ್ಷ ಬೇಡಿಕೆ ಆರೋಪ

ಇನ್ನು ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಪೊಲೀಸರಿಗೆ ಆರೋಪಿ ನೌಶಾದ್​ ಸಿಕ್ಕಿದ್ದ. ಈ ವೇಳೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಕೃತ್ಯ ಮುಚ್ಚಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಮುಂಗಡವಾಗಿ 3.95 ಲಕ್ಚ ಹಣವನ್ನ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಬೆಂಗಳೂರು ಪೊಲೀಸರು ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ತಿಳಿಸಿದ್ದರು. ಹೀಗಿದ್ದರೂ ಕಲ್ಲಂಚೇರಿ ಪೊಲೀಸರು ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು, ನಿನ್ನೆಯೇ ಎಫ್​ಐಆರ್ ದಾಖಲು ಮಾಡಿದ್ದರು. ಸದ್ಯಕ್ಕೆ ಕಲ್ಲಂಚೇರಿ ಪೊಲೀಸರು ವಶದಲ್ಲಿ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿಗಳು ಇದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Thu, 3 August 23