AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು

ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು
ವಿಧಾನಸೌಧ
Shivaprasad B
| Edited By: |

Updated on:Jul 29, 2023 | 5:20 PM

Share

ಬೆಂಗಳೂರು, ಜುಲೈ 29: ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ. ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ.

ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಹಾರಿಸಲು ಯತ್ನಿಸಿದ್ದಾಗಿ ಪೊಲೀಸ್​​ ವಿಚಾರಣೆಯಲ್ಲಿ ತಿಳಿದುಬಂದಿದೆ. ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಬಂದಿದ್ದರು.

ಇದನ್ನೂ ಓದಿ: ಬೆಂಗಳೂರು ಟು ಕಾಶಿಗೆ ಹೊರಟ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ

ನ್ಯಾನೊ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಕಡಿಮೆ ಅಥವಾ ಸಮ ತೂಕದ (ಯಾವುದೇ ಪರವಾನಗಿ ಅಗತ್ಯವಿಲ್ಲದ) ನ್ಯಾನೊ ಡ್ರೋನ್​ನನ್ನು ನೆಲದಿಂದ 50 ಅಡಿಗಿಂತ ಹೆಚ್ಚು ಅಂತರದಲ್ಲಿ ಹಾರಾಟ ನಡೆಸಬಹುದಾ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕು. ಅದೇ ರೀತಿಯಾಗಿ ನೀವು ವಿಮಾನ ನಿಲ್ದಾಣ ಅಥವಾ ಇತರೆ ಸೂಕ್ಷ್ಮ ನಿಯಂತ್ರಿತ ಪ್ರದೇಶಗಳಲ್ಲಿ ನ್ಯಾನೊ ಡ್ರೋನ್​ಗಳನ್ನು ಹಾರಾಟ ನಡೆಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ರಕ್ಷಣಾ ವಿಶ್ಲೇಷಕ ಗಿರೀಶ್​ ಲಿಂಗಣ್ಣ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ಮೈಕ್ರೋ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಹೆಚ್ಚು ತೂಕವಿದ್ದು, ಆದರೆ 2 ಕಿಲೋಗ್ರಾಂಗಳಿಗಿಂತ ಕಡಿಮೆ ಅಥವಾ ಸಮ ತೂಕದ ಮೈಕ್ರೋ ಡ್ರೋನ್​​ಗಳನು ಯಾವುದೇ ಪರವಾನಗಿ ಅಗತ್ಯವಿಲ್ಲದೇ ವಾಣಿಜ್ಯೇತರ ಕಾರ್ಯಕ್ಕೆ ಮಾತ್ರ ಬಳಕೆ ಮಾಡಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Sat, 29 July 23

Follow Us
Shivaprasad B
Shivaprasad B
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ