AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು

ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ ಎಫ್​​ಐಆರ್​ ದಾಖಲು
ವಿಧಾನಸೌಧ
Shivaprasad B
| Edited By: |

Updated on:Jul 29, 2023 | 5:20 PM

Share

ಬೆಂಗಳೂರು, ಜುಲೈ 29: ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ. ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ.

ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಹಾರಿಸಲು ಯತ್ನಿಸಿದ್ದಾಗಿ ಪೊಲೀಸ್​​ ವಿಚಾರಣೆಯಲ್ಲಿ ತಿಳಿದುಬಂದಿದೆ. ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಬಂದಿದ್ದರು.

ಇದನ್ನೂ ಓದಿ: ಬೆಂಗಳೂರು ಟು ಕಾಶಿಗೆ ಹೊರಟ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ

ನ್ಯಾನೊ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಕಡಿಮೆ ಅಥವಾ ಸಮ ತೂಕದ (ಯಾವುದೇ ಪರವಾನಗಿ ಅಗತ್ಯವಿಲ್ಲದ) ನ್ಯಾನೊ ಡ್ರೋನ್​ನನ್ನು ನೆಲದಿಂದ 50 ಅಡಿಗಿಂತ ಹೆಚ್ಚು ಅಂತರದಲ್ಲಿ ಹಾರಾಟ ನಡೆಸಬಹುದಾ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕು. ಅದೇ ರೀತಿಯಾಗಿ ನೀವು ವಿಮಾನ ನಿಲ್ದಾಣ ಅಥವಾ ಇತರೆ ಸೂಕ್ಷ್ಮ ನಿಯಂತ್ರಿತ ಪ್ರದೇಶಗಳಲ್ಲಿ ನ್ಯಾನೊ ಡ್ರೋನ್​ಗಳನ್ನು ಹಾರಾಟ ನಡೆಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ರಕ್ಷಣಾ ವಿಶ್ಲೇಷಕ ಗಿರೀಶ್​ ಲಿಂಗಣ್ಣ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ಮೈಕ್ರೋ ಮಾನವರಹಿತ ವಿಮಾನ ವ್ಯವಸ್ಥೆ

250 ಗ್ರಾಂ ಗಿಂತ ಹೆಚ್ಚು ತೂಕವಿದ್ದು, ಆದರೆ 2 ಕಿಲೋಗ್ರಾಂಗಳಿಗಿಂತ ಕಡಿಮೆ ಅಥವಾ ಸಮ ತೂಕದ ಮೈಕ್ರೋ ಡ್ರೋನ್​​ಗಳನು ಯಾವುದೇ ಪರವಾನಗಿ ಅಗತ್ಯವಿಲ್ಲದೇ ವಾಣಿಜ್ಯೇತರ ಕಾರ್ಯಕ್ಕೆ ಮಾತ್ರ ಬಳಕೆ ಮಾಡಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Sat, 29 July 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ