AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು

ಬಿಬಿಎಂಪಿ ಗುತ್ತಿಗೆದಾರರ ಸಂಘ ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಹೊಸ ತಿರುವು ಪಡೆದುಕೊಂಡಿದೆ. ಬಾಕಿ ಬಿಲ್​ ಬಿಡುಗಡೆ ಮಾಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ಸಂಘದ ಸದಸ್ಯರ ವಿರುದ್ಧ ಇದೀಗ ಎಫ್​ಐಆರ್​ ದಾಖಲಾಗಿದೆ.

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 17, 2023 | 2:02 PM

Share

ಬೆಂಗಳೂರು, (ಆಗಸ್ಟ್ 17): ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದ (BBMP contractors association) ನಡುವಿನ ಹಗ್ಗಜಗ್ಗಾಟ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಬಿಬಿಎಂಪಿ(BBMP) ಗುತ್ತಿಗೆದಾರರ ಸಂಘ ಆಗ್ರಹಿಸಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಗುತ್ತಿಗೆದಾರರಿಗೆ ನೋಟಿಸ್

ಈ ದೂರಿನ ಸಂಬಂಧ ಗುತ್ತಿಗೆದಾರರ ಪಿಟಿಷನ್ ವಿಚಾರಣೆಗೆ ಇಳಿದಿರುವ ಪೊಲೀಸರು, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶೇಷಾದ್ರಿಪುರಂ ಎಸಿಪಿ ಗುತ್ತಿಗೆದಾರರಿಗೆ ನೋಟಿಸ್​ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಒತ್ತಡ ಹೇರಿ ಹಣ ಬಿಡುಗಡೆ ಮಾಡುತ್ತಿಲ್ಲ. ನಮ್ಮ ಕಾಮಗಾರಿ ಮುಕ್ತಾಯ ಆಗಿದ್ದರೂ ಹಣ ಬಿಡುಗಡೆಯಾಗಿಲ್ಲ. ಡಿಕೆ ಶಿವಕುಮಾರ್ ಹಣ ಬಿಡುಗಡೆ ಮಾಡದಂತೆ ಅಧಿಕಾರಿಗಳ ಮೇಲೆ ಒತ್ತಾಯ ಮಾಡಿದ್ದಾರೆ. ಹೀಗಾಗಿ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ರಾಜ್ಯಪಾಲರಿಗೆ ನೀಡಲಾಗಿದ್ದ ದೂರು ಪೊಲೀಸ್ ಠಾಣೆಗೆ ರವಾನೆಯಾಗಿದ್ದು, ದೂರಿನಲ್ಲಿ ಸಹಿ ಹಾಕಿದ್ದ ಎಲ್ಲಾ ಗುತ್ತಿಗೆದಾರರಿಗೂ ವಿಚಾರಣೆ ಬರುವಂತೆ ನೋಟಿಸ್ ನೀಡಲಾಗಿದೆ. ಈಗಾಗಲೇ ಕೆಲವು ಗುತ್ತಿಗೆದಾರರು ಎಸಿಪಿ ಮುಂದೆ ಹಾಜರಾಗಿದ್ದು, ಎಸಿಪಿ ಪ್ರಕಾಶ್ ರೆಡ್ಡಿ ಅವರು ವಿಚಾರಣೆ ನಡೆಯುತ್ತಿದ್ದಾರೆ. ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಬಿಲ್‌ ಬಿಡುಗಡೆ ಮಾಡದ ಬಿಬಿಎಂಪಿ, ಸರ್ಕಾರದ ವಿರುದ್ಧ ಆರೋಪ ಮಾಡಲಾಗಿತ್ತು.. ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ, ದಾಖಲೆ ನೀಡುವಂತೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Published On - 12:21 pm, Thu, 17 August 23

ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್