AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ; ಬಿಜೆಪಿಯ ಎನ್​ಆರ್ ರಮೇಶ್ ವಿರುದ್ಧ ಎಫ್​ಐಆರ್ ದಾಖಲು

ಬರ್ತ್ ಡೇ ಆಚರಣೆ ವೇಳೆ ಸಾಕಷ್ಟು ಜನ ಸೇರಿದ್ದರು. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕೊವಿಡ್ ನಿಯಮ‌ ಉಲ್ಲಂಘಿಸಿ ಬರ್ತ್ ಡೇ ಆಚರಣೆ ಮಾಡಿದ್ದರು. ಈ ಹಿನ್ನೆಲೆ ಎನ್‌.ಆರ್ ರಮೇಶ್ ಮತ್ತು ಇತರರ ವಿರುದ್ದ ಎಫ್​ಐಆರ್ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ; ಬಿಜೆಪಿಯ ಎನ್​ಆರ್ ರಮೇಶ್ ವಿರುದ್ಧ ಎಫ್​ಐಆರ್ ದಾಖಲು
ಎನ್​ಆರ್ ರಮೇಶ್
TV9 Web
| Updated By: ganapathi bhat|

Updated on:Jan 20, 2022 | 12:08 PM

Share

ಬೆಂಗಳೂರು: ಇಲ್ಲಿನ ದಕ್ಷಿಣ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಎನ್.ಆರ್. ರಮೇಶ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರಿನ ಬನಶಂಕರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಾಜಿ ಕಾರ್ಪೋರೇಟರ್ ಕೂಡ ಆಗಿದ್ದ ಎನ್.ಆರ್ ರಮೇಶ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು. ಅವರ ವಿರುದ್ದ ಇದೀಗ ಎಫ್.ಐ.ಆರ್ ದಾಖಲು ಮಾಡಲಾಗಿದೆ.

ಬನಶಂಕರಿಯ ಮನೆ ಬಳಿ ರಮೇಶ್ ಸ್ಟೇಜ್ ಪ್ರೋಗ್ರಾಮ್ ಮಾಡಿದ್ದರು. ಮನೆ ಬಳಿ ಪೆಂಡಾಲ್ ಹಾಕಿ, ಜನ ಸೇರಿಸಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದರು. ಬರ್ತ್ ಡೇ ಆಚರಣೆ ವೇಳೆ ಸಾಕಷ್ಟು ಜನ ಸೇರಿದ್ದರು. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕೊವಿಡ್ ನಿಯಮ‌ ಉಲ್ಲಂಘಿಸಿ ಬರ್ತ್ ಡೇ ಆಚರಣೆ ಮಾಡಿದ್ದರು. ಈ ಹಿನ್ನೆಲೆ ಎನ್‌.ಆರ್ ರಮೇಶ್ ಮತ್ತು ಇತರರ ವಿರುದ್ದ ಎಫ್​ಐಆರ್ ದಾಖಲಿಸಲಾಗಿದೆ.

ರಾಜಕೀಯ ನಾಯಕರಿಂದಲೇ ಕೊವಿಡ್ ನಿಯಮಾವಳಿ ಉಲ್ಲಂಘನೆ

ವೀಕೆಂಡ್ ಕರ್ಫ್ಯೂನಲ್ಲೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊವಿಡ್ ನಿಯಮಾವಳಿ ಉಲ್ಲಂಘನೆ ಮಾಡಿದ ಘಟನೆಗಳು ರಾಜಕೀಯ ನಾಯಕರಿಂದ ಈ ಮೊದಲು ಕೂಡ ನಡೆದಿತ್ತು. ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊರೊನಾ ನಿಯಮಾವಳಿ ಉಲ್ಲಂಘಿಸಿದ್ದರು. ಕಳೆದ ಬಾರಿ ವೀಕೆಂಡ್ ಕರ್ಫ್ಯೂ ವೇಳೆ ಅವರು ಕೊರೊನಾ ನಿಯಮ ಉಲ್ಲಂಘಿಸಿದ್ದು ಜನರ ಹಾಗೂ ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷದ ಆಕ್ರೋಶಕ್ಕೆ ಕಾರಣವಾಗಿತ್ತು.

ರೇಣುಕಾಚಾರ್ಯ ಕೊವಿಡ್ ನಿಯಮ ಉಲ್ಲಂಘಿಸಿ ಅಂಗನವಾಡಿ ಉದ್ಘಾಟನೆ ಮಾಡಿದ್ದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಳೇಶ್ವರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭಾಗವಹಿಸಿದ್ದರು.

ವೀಕೆಂಡ್ ಕರ್ಫ್ಯೂ ‌ನಡುವೆ ಬಿಜೆಪಿ ಶಾಸಕ ಭರ್ಜರಿ ಬರ್ತ್​ಡೇ ಆಚರಣೆ ನಡೆಸಿದ್ದರು. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್.ವಿ‌. ರಾಮಚಂದ್ರ ಹುಟ್ಟುಹಬ್ಬ ಆಚರಣೆ ಮಾಡಲಾಗಿತ್ತು. ದಾವಣಗೆರೆಯ ಕೆ.ಬಿ.ಬಡಾವಣೆಯ ನಿವಾಸದ ಬಳಿ ಆಚರಣೆ ಮಾಡಲಾಗಿದ್ದು ಕೊವಿಡ್ ರೂಲ್ಸ್ ಉಲ್ಲಂಘಿಸಿ ಶಾಸಕರ ಮನೆ ಬಳಿ ಜನ ಜಮಾವಣೆ ಆಗಿತ್ತು. ಕರ್ತವ್ಯ ಮರೆತು ಪೊಲೀಸರು ಶಾಸಕರಿಗೆ ಅಭಿನಂದಿಸಲು ಬಂದಿದ್ದರು.

ಇದನ್ನೂ ಓದಿ: ಭಾರತದಲ್ಲಿ ಇಂದು ದಾಖಲಾದ ಕೊರೊನಾ ಕೇಸ್​ಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು; ಪಾಸಿಟಿವಿಟಿ ರೇಟ್ ಶೇ.​ 16ಕ್ಕೆ ಏರಿಕೆ, ಚೇತರಿಕೆ ಪ್ರಮಾಣದಲ್ಲಿ ಇಳಿಕೆ

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿ ಚಿಕ್ಕಮಗಳೂರು, ರಾಯಚೂರು, ಬಾದಾಮಿಯಲ್ಲಿ ಜಾತ್ರೆ: ದೇಗುಲ ಟ್ರಸ್ಟಿಗಳ ವಿರುದ್ಧ ಮೊಕದ್ದಮೆ ದಾಖಲು

Published On - 11:13 am, Thu, 20 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ