AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು

ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯೋರ್ವಳಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ಇದಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಮಾಲ್​ ಆಡಳಿತಾಧಿಕಾರಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಂಗಳೂರು ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು
ಲುಲು ಮಾಲ್ ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ
ಜಗದೀಶ ಬಿ.
| Edited By: |

Updated on: Oct 31, 2023 | 7:08 AM

Share

ಬೆಂಗಳೂರು, (ಅಕ್ಟೋಬರ್ 31): ನಗರದ ಲುಲು ಮಾಲ್​ನಲ್ಲಿ (lulu mall ) ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ((Sexual harassment) ) ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ​ ಪ್ರಕರಣಕ್ಕೆ ಸಂಬಂಧಿಸಿದಂತೆ  ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ(Bengaluru)  ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲ (sexual abuse)ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ಮಾಲ್​ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ವೈರಲ್

ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್​ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಇದರ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿರುವ ವಿಚಾರ ಟಿವಿಗಳ ಮೂಲಕ ಗೊತ್ತಾಗಿ ಲುಲು ಮಾಲ್​ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ