AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಪರಮೇಶ್ವರ್ ನಿವಾಸಕ್ಕೆ ನುಗ್ಗಲು ಯತ್ನ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಬೆಂಗಳೂರಿನ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದ ರಾಜ್ಯ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಚಿವ ಪರಮೇಶ್ವರ್ ನಿವಾಸಕ್ಕೆ ನುಗ್ಗಲು ಯತ್ನ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 28, 2023 | 11:35 AM

Share

ಬೆಂಗಳೂರು, (ಜುಲೈ 28)  ಗೃಹ ಸಚಿವ ಡಾ ಜಿ ಪರಮೇಶ್ವರ್(Dr G Parameshwar) ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದ ಬಿಜೆಪಿ(BJP) ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರಶಾಂತ್ ಸೇರಿದಂತೆ ಇತರೆ 10 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ ಬೆಂಗಳೂರಿನ(Bengaluru) ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿರುವ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ ನಿನ್ನೆ (ಜುಲೈ 27) ಗೃಹ ಸಚಿವ ಪರಮೇಶ್ವರ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು. ಆದ್ರೆ, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಸದಾಶಿವನಗರ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: Dr G Parameshwar: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ – ಗುಡುಗಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ಪರಮೇಶ್ವರ್​ ನಿವಾಸಕ್ಕೆ ನುಗ್ಗಲು ಯತ್ನಸಿದ್ದ ಕಾರ್ಯಕರ್ತರು

ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ(Udupi College) ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್​ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.  ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್​ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗೊತ್ತು. ಸದಾಶಿವನಗರದ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಿ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ