Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಹಣ ಅಕ್ರಮ: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್ಐಆರ್, ಓರ್ವ ಆಫೀಸರ್ ಅರೆಸ್ಟ್

ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ ಸಂಬಂಧ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೋಟಿ ಕೋಟಿ ಹಣ ಅಕ್ರಮ: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್ಐಆರ್, ಓರ್ವ ಆಫೀಸರ್ ಅರೆಸ್ಟ್
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on:Oct 04, 2023 | 9:36 AM

ಬೆಂಗಳೂರು, (ಅಕ್ಟೋಬರ್ 04): ಬಿಎಂಟಿಸಿಯ(BMTC) ಕಮರ್ಷಿಯಲ್ ವಿಭಾಗದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿಯ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಅನ್ವಯ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಎ1 ಆರೋಪಿ ಶ್ರೀರಾಮ್ ಮುಲ್ಕಾವನ್ ಎನ್ನುವರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಮತ್ತು ಹಿಂದಿನ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಅರುಣ್. ಕೆ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಕೋಟಿ ಕೋಟಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಆರೋಪಿಗಳ ಪಟ್ಟಿ

  • A1 ಶ್ರೀ‌ ರಾಮ್ ಮುಲ್ಕಾವನ್ ( ಅಂದಿನ ) ಮುಖ್ಯ ಸಂಚಾರ ವ್ಯವಸ್ಥಾಪಕರು)
  • A2ಶ್ಯಾಮಲಾ. ಎಸ್. ಮದ್ದೋಡಿ, (ವಿಭಾಗೀಯ ಸಂಚಾರ ಅಧಿಕಾರಿ)
  • A3 ಮಮತಾ. ಬಿ.ಕೆ, ಸಹಾಯಕ( ಸಹಾಯಕ ಸಂಚಾರ ವ್ಯವಸ್ಥಾಪಕರು)
  • A4 ಅನಿತಾ.ಟಿ , (ಸಹಾಯಕ ಸಂಚಾರ ಅಧೀಕ್ಷಕಿ)
  • A5 ಗುಣಶೀಲ, (ಸಹಾಯಕ ಸಂಚಾರ ನಿರೀಕ್ಷಕಿ) A6 ವೆಂಕಟೇಶ್. ಆರ್, (ಕಿರಿಯ ಸಹಾಯಕ)
  • A7 ಪ್ರಕಾಶ್ ಕೊಪ್ಪಳ, (ಕಿರಿಯ ಸಹಾಯಕ)

ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಮತ್ತು ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್. ಕೆ ಸಹಿಯನ್ನು ಪೋರ್ಜರಿ ಮಾಡಿದ್ದಾರೆ. ಒಂದು ಕಡತದಲ್ಲಿ 10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ 6 ಕೋಟಿ 91 ಲಕ್ಷ ಹಾಗೂ 21 ಲಕ್ಷದ 64 ಸಾವಿರ, 1 ಲಕ್ಷದ 5 ಸಾವಿರ ಹೀಗೆ ಒಟ್ಟು ಸುಮಾರು 17 ಕೋಟಿ 64 ಲಕ್ಷ ರುಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಟಿವಿ‌9 ರಹಸ್ಯ ಕಾರ್ಯಾಚರಣೆ ಬಳಿಕ BMTC ಎಂಡಿ ತನಿಖೆಗೆ ಆದೇಶಿಸಿದ್ದರು. ಸಾಕಷ್ಟು ಬಾರಿ ವಾರ್ನಿಂಗ್ ನೀಡಿದರೂ ಅಲ್ಲಲ್ಲಿ ಅಕ್ರಮ ನಡೆಯುತ್ತಲೆ ಇತ್ತು. ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ 4-5 ಲಕ್ಷ ರೂ. ಲಂಚ ತೆಗೆದುಕೊಂಡಿರುವುದು ಸಾಬೀತಾಗಿದೆ. ಈ ಪ್ರಕರಣ ಸಂಬಂಧ 7 ಅಧಿಕಾರಿಗಳು, ಸಿಬ್ಬಂದಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿದ್ರೆ ಸಾಕಾಗಲ್ಲ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಸರಿಯಲ್ಲ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:08 am, Wed, 4 October 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ