AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು
ಜೆ.ಜೆ.ನಗರ ಪೊಲೀಸ್ ಠಾಣೆ
TV9 Web
| Edited By: |

Updated on: Dec 29, 2022 | 11:20 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂಧ್ರ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ. ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್​ಎಲ್ ಶಿವ ಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮತಾಂತರಗೊಂಡಿದ್ದ ಕುಟುಂಬ ಘರ್​ ವಾಪಸಿ; ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್‌

ತುಮಕೂರಿನಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆ: ಹಿಂದೂ ದೇವರುಗಳ ಬಗ್ಗೆ ಅವಮಾನ ಆರೋಪ

ತುಮಕೂರು: ಜಿಲ್ಲೆಯಲ್ಲಿ ವಿವಿಧ ಆಮಿಷಗಳನ್ನುವೊಡ್ಡಿ ಕ್ರೈಸ್ತ ಧರ್ಮ (Christianity)ಕ್ಕೆ ಮತಾಂತರ (Conversion) ಮಾಡಲು ಯತ್ನಿಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ, ಗಣೇಶ ಹಬ್ಬ ಸೇರಿದಂತೆ ಹಲವು ಹಿಂದೂ ಹಬ್ಬಗಳು (Hindu Festivals) ಮೂಡನಂಬಿಕೆಯಾಗಿದೆ ಎಂದು ಮತಾಂತರಿಗಳು ಹೇಳಿ ಹಿಂದೂ ದೇವಾನು ದೇವತೆಗಳನ್ನು ಅವಮಾನಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತುಮಕೂರಿನ ಮರಳೂರು ದಿಣ್ಣೆಯಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯಿಂದ ಮತಾಂತರ ಮಾಡಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ರವಿ ಎಂಬುವರ ಮನೆಗೆ ಬಂದ ಮತಾಂತರಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದ್ದು, ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ ಎಂದು ಆಮಿಷವೊಡ್ಡಿದ್ದಾರೆ.

ಅಷ್ಟೇ ಅಲ್ಲದೆ, ನಮ್ಮ ಧರ್ಮಕ್ಕೆ ಬಂದರೆ ಜೀವನದಲ್ಲಿ ಸದಾ ಆತ್ಮರಕ್ಷಣೆ‌ ಹೊಂದುವಿರಿ ಅಂತಾ ಹೇಳಿ ಮೂವರು ಮತಾಂತರಿಗಳು ಹಿಂದೂಗಳ ಮನಸ್ಸನ್ನು ಪರಿವರ್ತನೆ ಮಾಡಲು ಯತ್ನಿಸಿದ್ದಾರೆ. ಇಷ್ಟಕ್ಕೂ ಸುಮ್ಮನಾಗದ ಮತಾಂತರಿಗಳು ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಗಣೇಶ ಹಬ್ಬ ಸೇರಿದಂತೆ ಹಲವು ಹಬ್ಬಗಳು ಮೂಡನಂಬಿಕೆಯಾಗಿದೆ. ದೇವರು ಒಬ್ಬನೇ 36 ಕೋಟಿ ದೇವರುಗಳು ಇಲ್ಲ ಎಂದು ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಘಟನೆ ಸಂಬಂಧ ರವಿ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್