AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು
ಜೆ.ಜೆ.ನಗರ ಪೊಲೀಸ್ ಠಾಣೆ
TV9 Web
| Updated By: ಆಯೇಷಾ ಬಾನು|

Updated on: Dec 29, 2022 | 11:20 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂಧ್ರ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ. ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್​ಎಲ್ ಶಿವ ಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮತಾಂತರಗೊಂಡಿದ್ದ ಕುಟುಂಬ ಘರ್​ ವಾಪಸಿ; ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್‌

ತುಮಕೂರಿನಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆ: ಹಿಂದೂ ದೇವರುಗಳ ಬಗ್ಗೆ ಅವಮಾನ ಆರೋಪ

ತುಮಕೂರು: ಜಿಲ್ಲೆಯಲ್ಲಿ ವಿವಿಧ ಆಮಿಷಗಳನ್ನುವೊಡ್ಡಿ ಕ್ರೈಸ್ತ ಧರ್ಮ (Christianity)ಕ್ಕೆ ಮತಾಂತರ (Conversion) ಮಾಡಲು ಯತ್ನಿಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ, ಗಣೇಶ ಹಬ್ಬ ಸೇರಿದಂತೆ ಹಲವು ಹಿಂದೂ ಹಬ್ಬಗಳು (Hindu Festivals) ಮೂಡನಂಬಿಕೆಯಾಗಿದೆ ಎಂದು ಮತಾಂತರಿಗಳು ಹೇಳಿ ಹಿಂದೂ ದೇವಾನು ದೇವತೆಗಳನ್ನು ಅವಮಾನಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತುಮಕೂರಿನ ಮರಳೂರು ದಿಣ್ಣೆಯಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯಿಂದ ಮತಾಂತರ ಮಾಡಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ರವಿ ಎಂಬುವರ ಮನೆಗೆ ಬಂದ ಮತಾಂತರಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದ್ದು, ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ ಎಂದು ಆಮಿಷವೊಡ್ಡಿದ್ದಾರೆ.

ಅಷ್ಟೇ ಅಲ್ಲದೆ, ನಮ್ಮ ಧರ್ಮಕ್ಕೆ ಬಂದರೆ ಜೀವನದಲ್ಲಿ ಸದಾ ಆತ್ಮರಕ್ಷಣೆ‌ ಹೊಂದುವಿರಿ ಅಂತಾ ಹೇಳಿ ಮೂವರು ಮತಾಂತರಿಗಳು ಹಿಂದೂಗಳ ಮನಸ್ಸನ್ನು ಪರಿವರ್ತನೆ ಮಾಡಲು ಯತ್ನಿಸಿದ್ದಾರೆ. ಇಷ್ಟಕ್ಕೂ ಸುಮ್ಮನಾಗದ ಮತಾಂತರಿಗಳು ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಗಣೇಶ ಹಬ್ಬ ಸೇರಿದಂತೆ ಹಲವು ಹಬ್ಬಗಳು ಮೂಡನಂಬಿಕೆಯಾಗಿದೆ. ದೇವರು ಒಬ್ಬನೇ 36 ಕೋಟಿ ದೇವರುಗಳು ಇಲ್ಲ ಎಂದು ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಘಟನೆ ಸಂಬಂಧ ರವಿ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ