AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕೇಂದ್ರ ಕಚೇರಿಗೆ ಆ್ಯಂಬುಲೆನ್ಸ್ ಬೇಕು: ನೌಕರರ ಸಂಘದ ಅಧ್ಯಕ್ಷ

ಇತ್ತೀಚೆಗೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟಣವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಜೀವಹಾನಿ ಸಂಭವಿಸಿತ್ತು. ಈ ವೇಳೆ ಸಕಾಲಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಗಾಯಾಳು ನೌಕರರು ಪರದಾಡುವಂತಾಗಿತ್ತು. ಈ ಬಗ್ಗೆ ಮಾತನಾಡಿದ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್, ಬಿಬಿಎಂಪಿ ಕೇಂದ್ರ ಕಚೇರಿಗೆ ಆ್ಯಂಬುಲೆನ್ಸ್ ಬೇಕು ಎಂದರು.

ಬಿಬಿಎಂಪಿ ಕೇಂದ್ರ ಕಚೇರಿಗೆ ಆ್ಯಂಬುಲೆನ್ಸ್ ಬೇಕು: ನೌಕರರ ಸಂಘದ ಅಧ್ಯಕ್ಷ
ಬಿಬಿಎಂಪಿ
Shivaraj
| Edited By: Rakesh Nayak Manchi|

Updated on: Sep 02, 2023 | 2:17 PM

Share

ಬೆಂಗಳೂರು, ಸೆ.2: ಇತ್ತೀಚೆಗೆ ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟಣವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಜೀವಹಾನಿ ಸಂಭವಿಸಿತ್ತು. ಈ ವೇಳೆ ಸಕಾಲಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಗಾಯಾಳು ನೌಕರರು ಪರದಾಡುವಂತಾಗಿತ್ತು. ಈ ಬಗ್ಗೆ ಮಾತನಾಡಿದ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್, ಬಿಬಿಎಂಪಿ ಕೇಂದ್ರ ಕಚೇರಿಗೆ ಆ್ಯಂಬುಲೆನ್ಸ್ ಬೇಕು ಎಂದರು.

ಬೆಂಕಿ ಪ್ರಕರಣದಲ್ಲಿ ಸಕಾಲಕ್ಕೆ ಆಂಬ್ಯುಲೆನ್ಸ್ ಇಲ್ಲದೇ ನೌಕರರು ಪರದಾಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳಿರುವ ಎರಡು ಆ್ಯಂಬ್ಯುಲೆನ್ಸ್​ಗಳನ್ನು ನೌಕರರ ಸಂಘದಿಂದಲೇ ಖರೀದಿಸಿ ಬಿಬಿಎಂಪಿಗೆ ಹಸ್ತಾಂತರಿಸಲು ತೀರ್ಮಾನ ಮಾಡಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲೇ ಇವುಗಳು ಕಾರ್ಯನಿರ್ವಹಿಸಲಿವೆ ಎಂದರು.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಕರಡು ಪ್ರತಿಗೆ 1400 ಕ್ಕೂ ಹೆಚ್ಚು ಆಕ್ಷೇಪಣೆ; ಗಡುವು ವಿಸ್ತರಣೆ ಸಾಧ್ಯತೆ ಅನುಮಾನ

ಅಗ್ನಿ ಅವಘಡದಲ್ಲಿ ಮೃತಒಟ್ಟ ಶಿವಕುಮಾರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಒದಗಿಸುತ್ತೇವೆ ಎಂದು ಹೇಳಿದ ಅಮೃತ ರಾಜ್, ಬಿಬಿಎಂಪಿಯ ಕ್ಲಾಸ್ 1 ನೌಕರರಿಂದ ಹಿಡಿದು ಡಿ ದರ್ಜೆ ನೌಕರರು ಸೇರಿ ಪ್ರತಿಯೊಬ್ಬರೂ ಹಣ ಸಹಾಯ ಮಾಡಲಾಗುವುದು. ಎಲ್ಲಾ ನೌಕರರಿಂದ ಸರಿಸುಮಾರು 95 ಲಕ್ಷ ಹಣ ಸಂಗ್ರಹಿಸಿ ಶಿವಕುಮಾರ್ ಕುಟುಂಬಕ್ಕೆ ಹಸ್ತಾಂತರಿಸಲು ತೀರ್ಮಾನ ಮಾಡಲಾಗಿದೆ ಎಂದರು.

ಸರ್ಕಾರಕ್ಕೆ ಪರಿಹಾರದ ಬಗ್ಗೆ ಪ್ರಸ್ತಾವನೆ

ಬೆಂಕಿ ಅವಘಡದಲ್ಲಿ ಮೃತ ಶಿವಕುಮಾರ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಸರ್ಕಾರಕ್ಕೆ ಪರಿಹಾರದ ಬಗ್ಗೆ ಪ್ರಸ್ತಾವನೆ ಕಳಿಸುತ್ತೇವೆ. ಮೃತರ ಪತ್ನಿಗೆ ಖಾಯಂ ಕೆಲಸದ ವಿಚಾರವಾಗಿಯೂ ಪ್ರಸ್ತಾವನೆಯನ್ನೂ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದರು.

ಬೆಂಕಿ ಪ್ರಕರಣದ ತನಿಖೆ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಬೆಂಕಿ ಪ್ರಕರಣದಲ್ಲಿ ಕೆಲ ಖಾಸಗಿ ಸಂಸ್ಥೆಯಿಂದ ಸಲಹೆ ಪಡೆಯಲಾಗುತ್ತಿದೆ. ಸೆಪ್ಟೆಂಬರ್ 15 ಕ್ಕೆ ವರದಿ ನೀಡುವುದಾಗಿ ಸಮಿತಿ ಹೇಳಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ