Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಕ್​ಡೊನಾಲ್ಡ್ಸ್​ನಲ್ಲಿ ಅಗ್ನಿ ಅವಘಡ; ಶಾರ್ಟ್ ಸರ್ಕ್ಯೂಟ್​ನಿಂದ ಘಟನೆ ಸಂಭವ

Bengaluru: ಅಗ್ನಿಶಾಮಕ ವಾಹನ ದೌಡಾಯಿಸಿದೆ. ಬಿಟಿಎಂ ಲೇಔಟ್ 16 ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ಸಾಗಿದೆ.

ಬೆಂಗಳೂರು: ಮೆಕ್​ಡೊನಾಲ್ಡ್ಸ್​ನಲ್ಲಿ ಅಗ್ನಿ ಅವಘಡ; ಶಾರ್ಟ್ ಸರ್ಕ್ಯೂಟ್​ನಿಂದ ಘಟನೆ ಸಂಭವ
ಮೆಕ್​ಡೊನಾಲ್ಡ್ಸ್​ನಲ್ಲಿ ಅಗ್ನಿ ಅವಘಡ
Follow us
TV9 Web
| Updated By: ganapathi bhat

Updated on:Sep 30, 2021 | 2:51 PM

ಬೆಂಗಳೂರು: ನಗರದ ಬಿಟಿಎಂ ಲೇಔಟ್​ 16ನೇ ಮುಖ್ಯರಸ್ತೆಯಲ್ಲಿ ಇರುವ ಮೆಕ್​ಡೊನಾಲ್ಡ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಿಟಿಎಂ‌ ಲೇಔಟ್​ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಈ ಅಗ್ನಿ ಆಕಸ್ಮಿಕ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಉಡುಪಿ ಗಾರ್ಡನ್ ಹೋಟೆಲ್ ಬಳಿ ಇರುವ ಮೆಕ್​ಡೋನಾಲ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಅಗ್ನಿ ಅಪಘಾತ ಸಂಭವಿಸಿದೆ.

ಮೈಕೋ ಲೇಔಟ್​ನಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಸಿಬ್ಬಂದಿ ಹಾಗೂ ಸ್ಥಳೀಯರು ಹೊಗೆ ಬರ್ತಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ, ಸ್ಥಳಕ್ಕೆ ಒಂದು ಅಗ್ನಿಶಾಮಕ ವಾಹನ ದೌಡಾಯಿಸಿದೆ. ಬಿಟಿಎಂ ಲೇಔಟ್ 16 ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ಸಾಗಿದೆ.

ಒಂದು ರೂಮ್​ನಲ್ಲಿ ಚಿಕ್ಕದಾಗಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಇಡೀ ಬೆಲ್ಡಿಂಗ್​ಗೆ ಹೊಗೆ ಆವರಿಸಿಕೊಂಡಿತ್ತು. ಮೆಕ್​ಡೋನಾಲ್ಡ್ ನಲ್ಲಿ ಇರುವ ಆಹಾರ ಪದಾರ್ಥಗಳೆಲ್ಲ ಹಾಳಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೋಲಿಸರು ಕೂಡ ಭೇಟಿ ನೀಡಿದ್ದಾರೆ. ಸದ್ಯ ಬೆಂಕಿ ಆರಿಸಿದ್ದು, ಎಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನುವುದನ್ನು ಸ್ಥಳೀಯ ಪೋಲಿಸರು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಇತ್ತೀಚೆಗೆ ಇಂತಹ ಪ್ರಕರಣಗಳು ವರದಿ ಆಗುತ್ತಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ತಾಯಿ, ಮಗಳು ಮೃತಪಟ್ಟಿದ್ದರು. ಕಟ್ಟಡ ಕುಸಿತ ಪ್ರಕರಣಗಳು ಕೂಡ ಕಳೆದ ಎರಡು ದಿನಗಳಲ್ಲಿ ವರದಿ ಆಗಿವೆ. ಮೂರು ಅಂತಸ್ತಿನ ಎರಡು ಕಟ್ಟಡಗಳು ಕುಸಿದು ಬಿದ್ದಿವೆ. ಇಂತಹ ಘಟನೆಗಳು ಆದಷ್ಟು ಕಡಿಮೆ ಆಗುವಂತೆ ಎಚ್ಚರಿಕೆ ವಹಿಸಬೇಕಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ! ಮಗುವನ್ನು ರಕ್ಷಿಸುವುದಕ್ಕೆ ಕೆಳಗೆ ಎಸೆದ ಪೋಷಕರು

ಇದನ್ನೂ ಓದಿ: ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ; ನಿನ್ನೆಯಷ್ಟೇ ಅಮೆರಿಕದಿಂದ ಬಂದಿದ್ದರು ಕುಟುಂಬಸ್ಥರು

Published On - 2:45 pm, Thu, 30 September 21

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ