ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ತಡರಾತ್ರಿ 5 ರಿಂದ 6 ಗುಜರಿ ಗೋಡೌನ್‌ಗಳಲ್ಲಿ ಅಗ್ನಿ ಅವಘಡ ಸಂಭವಿಸಿ ಹಲವು ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದ ನಾಯಂಡಹಳ್ಳಿ ಬಳಿಯ ಪ್ರಮೋದ್ ಲೇಔಟ್‌ನಲ್ಲಿ ನಡೆದಿದೆ.

ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ
ಸಾಂಧರ್ಬಿಕ ಚಿತ್ರ Image Credit source: NDTV
Follow us
|

Updated on:Mar 10, 2023 | 7:30 AM

ಬೆಂಗಳೂರು: ತಡರಾತ್ರಿ 5 ರಿಂದ 6 ಗುಜರಿ ಗೋಡೌನ್‌ಗಳಲ್ಲಿ (Gujuri Godown) ಅಗ್ನಿ ಅವಘಡ (Fire Accident) ಸಂಭವಿಸಿ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದ ನಾಯಂಡಹಳ್ಳಿ (Nayandahalli) ಬಳಿಯ ಪ್ರಮೋದ್ ಲೇಔಟ್‌ನಲ್ಲಿ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿಯನ್ನು ನಂದಿಸಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 3-4 ಎಕರೆ ಜಾಗಕ್ಕೆ ಬೆಂಕಿ ವ್ಯಾಪಿಸಿತ್ತು. ತಡರಾತ್ರಿ ಗೋಡೌನ್​ಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಪಕ್ಕದಲ್ಲೆ ಕಾರ್ಯನಿರ್ವಹಿಸುತ್ತಿದ್ದ ಮಾರ್ಷಲ್​ಗಳು ಸ್ಥಳಕ್ಕೆ ದೌಡಾಯಿಸಿ, ಗೌಡೌನಲ್ಲಿ ಮಲಗಿದ್ದ ಹಲವರನ್ನು ಎಬ್ಬಿಸಿ ಆಚೆ ಕಳುಹಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: ಚಾರ್ಮಾಡಿಘಾಟ್​ನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಅಪಾರ ಪ್ರಮಾಣದ ವನ್ಯಸಂಪತ್ತು ಬೆಂಕಿಗಾಹುತಿ

ಗೋಧಿ ಜಮೀನಿಗೆ ಬೆಂಕಿ, 1.50 ಲಕ್ಷ ರೂ. ಮೌಲ್ಯದ ಬೆಂಕಿ ಭಸ್ಮ

ಗದಗ: ಗೋಧಿ ಜಮೀನಿಗೆ ಬೆಂಕಿ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ 3 ಎಕರೆ ಗೋಧಿ ಭಸ್ಮವಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದಲ್ಲಿ ನಡೆದಿದೆ. ರೈತ ವೆಂಕನಗೌಡ್ರ ಗದ್ದಿಗೌಡ್ರ ಎಂಬುವರಿಗೆ ಸೇರಿದ 3 ಎಕರೆ ಜಮೀನಿಗೆ ವಿದ್ಯುತ್ ಶಾಟ್ ಸರ್ಕಿಟ್​​ನಿಂದ ಬೆಂಕಿ ತಗುಲಿರುವ ಆರೋಪ ಕೇಳಿ ಬಂದಿದೆ. ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರಯೋಜನವಾಗಲಿಲ್ಲ. ಇದರಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ 40 ಕ್ವಿಂಟಾಲ್ ನಷ್ಟು ಗೋಧಿ ಸುಟ್ಟು ಹೋಗಿದೆ. ರೈತ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾನೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಫರ್ನೀಚರ್ ಅಂಗಡಿ

ಆನೇಕಲ್: ಫರ್ನೀಚರ್ ಅಂಗಡಿದೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ ಫರ್ನೀಚರ್ ವಸ್ತುಗಳ ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ದೊಮ್ಮಸಂದ್ರ ಮುಖ್ಯ ರಸ್ತೆಯಲ್ಲಿ ನಿನ್ನೆ (ಮಾ.9) ರಂದು ನಡೆದಿತ್ತು. ಶಾಟ್ ಸೆರ್ಕ್ಯುಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ರಘು ರೆಡ್ಡಿ ಎಂಬುವವರಿಗೆ ಸೇರಿದ ಜಾಗದಲ್ಲಿ ಫರ್ನೀಚರ್ ವ್ಯವಹಾರಕ್ಕೆ ಅಂಗಡಿ ಬಾಡಿಗೆಗೆ ನೀಡಲಾಗಿತ್ತು. ಈ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭಿವಿಸಿದ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 45 ಲಕ್ಷದಷ್ಟು ಬೆಲೆ ಬಾಳುವ ಫರ್ನೀಚರ್ ಸಾಮಾನು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.

ಬೆಂಕಿ ಅನಾಹುತದಿಂದ ಅಕ್ಕಪಕ್ಕದ ಅಂಗಡಿಗಳ ಮಾಲಿಕರಿಗೂ ಆತಂಕ ವ್ಯಕ್ತವಾಗಿತ್ತು. ಕೆಲ ಗಂಟೆಗಳ ಕಾಲ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. ಹಾಗೇ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಫುಲ್‌ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೈಕೊಂಡರಹಳ್ಳಿ, ದೊಮ್ಮಸಂದ್ರ, ಬಡವಾಣೆ ಪವರ್ ಕಟ್  ಮಾಡಲಾಗಿತ್ತು.

ಹೆಚ್​.ಡಿ ಕೋಟೆ ಮೈದಾನದಲ್ಲಿ ಆಕಸ್ಮಿಕ ಬೆಂಕಿ

ಮೈಸೂರು: ಜಿಲ್ಲೆಯ ಹೆಚ್​.ಡಿ ಕೋಟೆ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವಂತಹ ನಿನ್ನೆ (ಮಾ. 9) ರಂದು ಘಟನೆ ನಡೆದಿತ್ತು. ಕಿಡಿಗೇಡಿಗಳು ಸಿಗರೇಟು ಸೇದುವ ವೇಳೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿತ್ತು. ಪಕ್ಕದಲ್ಲೇ ಇದ್ದ ವಿದ್ಯುತ್ ಘಟಕ, ವಾಲ್ಮೀಕಿ ಭವನ ಮತ್ತು ಜೆಎಸ್​.ಎಸ್ ಮಂಗಳ ಮಂಟಪದ ಆವರಣಕ್ಕೆ ಬೆಂಕಿ ವ್ಯಾಪಿಸುವ ಭೀತಿ ಎದುರಾಗಿತ್ತು. ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ‌ ನಂದಿಸಿದ್ದು, ಭಾರಿ ಅನಾಹುತ ತಪ್ಪಿದೆ. ಹೆಚ್​​.ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 am, Fri, 10 March 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ