AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನಲ್ಲಿ ಓರ್ವ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಬೆಂಗಳೂರಿನ  ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ
Jagadisha B
| Edited By: |

Updated on:Nov 19, 2024 | 7:58 PM

Share

ಬೆಂಗಳೂರು, (ನವೆಂಬರ್ 19): ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ  ಯುವತಿ ಸುಟ್ಟು ಕರಕಲಾಗಿದ್ದು,   ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (25) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಇಂದು (ನವೆಂಬರ್ 19) ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್​ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್​ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್​ ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳು ಸುಟ್ಟ ಭಸ್ಮವಾಗಿವೆ.

ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್​ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್​ನಲ್ಲಿದ್ದ 45ಕ್ಕೂ 45 ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:17 pm, Tue, 19 November 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!