AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನಲ್ಲಿ ಓರ್ವ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಬೆಂಗಳೂರಿನ  ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ
Jagadisha B
| Edited By: |

Updated on:Nov 19, 2024 | 7:58 PM

Share

ಬೆಂಗಳೂರು, (ನವೆಂಬರ್ 19): ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ  ಯುವತಿ ಸುಟ್ಟು ಕರಕಲಾಗಿದ್ದು,   ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (25) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಇಂದು (ನವೆಂಬರ್ 19) ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್​ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್​ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್​ ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳು ಸುಟ್ಟ ಭಸ್ಮವಾಗಿವೆ.

ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್​ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್​ನಲ್ಲಿದ್ದ 45ಕ್ಕೂ 45 ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:17 pm, Tue, 19 November 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!