AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನಲ್ಲಿ ಓರ್ವ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಬೆಂಗಳೂರಿನ  ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ
Jagadisha B
| Edited By: |

Updated on:Nov 19, 2024 | 7:58 PM

Share

ಬೆಂಗಳೂರು, (ನವೆಂಬರ್ 19): ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ  ಯುವತಿ ಸುಟ್ಟು ಕರಕಲಾಗಿದ್ದು,   ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (25) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಇಂದು (ನವೆಂಬರ್ 19) ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್​ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್​ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್​ ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳು ಸುಟ್ಟ ಭಸ್ಮವಾಗಿವೆ.

ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್​ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್​ನಲ್ಲಿದ್ದ 45ಕ್ಕೂ 45 ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:17 pm, Tue, 19 November 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ