AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಒಕಿನೊವಾ ಶೋರೂಮ್​

ಕಳೆದ ವರ್ಷ ನವೆಂಬರ್​ನಲ್ಲಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಜೀವ ದಹನವಾಗಿದ್ದರು. ಈ ಕರಾಳ ಸುದ್ದಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಎಲೆಕ್ಟ್ರಿಕ್ ಬೈಕ್​ ಶೋರೂಮ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್​ಗಳು ಸುಟ್ಟು ಭಸ್ಮವಾಗಿವೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಒಕಿನೊವಾ ಶೋರೂಮ್​
ಎಲೆಕ್ಟ್ರಿಕ್​​​ ಬೈಕ್​​ ಶೋ ರೂಮ್​ನಲ್ಲಿ ಅಗ್ನಿ ಅವಘಡ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 27, 2025 | 4:00 PM

Share

ಬೆಂಗಳೂರು, (ಜನವರಿ 27): ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಇಂದು (ಜನವರಿ 27) ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್‌ ಚಾರ್ಜ್‌ ಆಗಿ ಸ್ಫೋಟಿಸಿದ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಶೋರೂಮ್​ನಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೆ, ಕಟ್ಟಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜಾಜಿನಗರದ ರಾಜ್​​ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್​ ಬೈಕ್​ ಶೋರೂಮ್​ನಲ್ಲಿ ಒಟ್ಟು 74 ಬೈಕ್​ಗಳು ಇದ್ದವು. ಈ ಪೈಕಿ 19 ಬೈಕ್​ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 9 ಬೈಕ್​ಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ಮಹದೇವಪುರದಲ್ಲಿ ಬೈಕ್ ಶೋರೂಮಿಗೆ ಬೆಂಕಿ, ರೂ.1 ಕೋಟಿ ಮೌಲ್ಯದ ಬೈಕ್​ಗಳು ಅಗ್ನಿಗಾಹುತಿ

ಇನ್ನು ಲೈಸೆನ್ಸ್​ ಅವಧಿ ಮೀರಿದ ಬೈಕ್ ಮಾರಾಟ ಮಾಡುತ್ತಿದ್ದ ಆರೋಪದಡಿ ಶುಕ್ರವಾರವಷ್ಟೇ ಆರ್​​ಟಿಓ ಅಧಿಕಾರಿಗಳು ಈ ಶೋರೋಮ್​ ಮೇಲೆ ದಾಳಿ ಮಾಡಿದ್ದರು. ಕಡಿಮೆ ಸ್ಪೀಡ್ 25 ಕಿ.ಮೀ ಮತ್ತು ಕಡಿಮೆ ವ್ಯಾಟ್ ಬ್ಯಾಟರಿ ಬಳಕೆಗೆ ಅನುಮತಿ ನೀಡಲಾಗಿತ್ತು. ಆದ್ರೆ ಹೆಚ್ಚಿನ ಸ್ಪೀಡ್ ಹಾಗೂ ಒಂದು ಕಿಲೋ ವ್ಯಾಟ್ ಬ್ಯಾಟರಿ ಬಳಕೆ ಮಾಡಲಾಗಿದೆ. ಬ್ಯಾಟರಿ ಕ್ವಾಲಿಟಿ ಇಲ್ಲದಿದ್ದದ್ದೇ ಘಟನೆಗೆ ಕಾರಣ ಎಂದು ಮಾಹಿತಿ ಲಭ್ಯವಾಗಿದೆ.

ಅಗ್ನಿಶಾಮಕ ಅಧಿಕಾರಿ ಕಿಶೋರ್ ಹೇಳಿದ್ದೇನು?

ಇನ್ನು ಅಗ್ನಿ ಅವಘಡದ ಬಗ್ಗೆ ಅಗ್ನಿಶಾಮಕ ಅಧಿಕಾರಿ ಕಿಶೋರ್ ಪ್ರತಿಕ್ರಿಯಿಸಿದ್ದು, ಇಂದು ಮಧ್ಯಾಹ್ನ 2.06 ನಿಮಿಷಕ್ಕೆ ಅಗ್ನಿಶಾಮಕ ಕಂಟ್ರೋಲ್ ಗೆ ರೂಮ್ ಗೆ ಕಾಲ್ ಬಂದಿದೆ. ಬಳಿಕ ರಾಜಾಜಿನಗರ ಅಗ್ನಿಶಾಮಕ ಸೆಂಟರ್ ನಿಂದ ಎರಡು ವಾಹನ ಬಂದಿದೆ. ಬೆಂಕಿ ಸಂಪೂರ್ಣವಾಗಿ ನಂದಿಸಲಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸೆಕ್ಯೂರಿಟ್ ಅಥವಾ ಬ್ಯಾಟರಿ ಸ್ಪೋಟಗೊಂಡಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ನಾಲ್ಕು ಮಂದಿ ಒಳಗೆ ಇದ್ರು. ಅವರು ಕೂಡಲೇ ಹೊರ ಬಂದಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಎಲೆಕ್ಟ್ರಿಕ್​ ಬೈಕ್​ ಶೋರೋಮ್​ನಲ್ಲಿ ಅಗ್ನಿ ದುರಂತದಲ್ಲಿ ಓರ್ವ ಯುವತಿ ಸಜೀವ ದಹನವಾಗಿದ್ದಳು. ಇದಾದ ಬಳಿಕ 2025ರ ಹೊಸ ವರ್ಷದ ಮೊದಲ ದಿನದಂದೇ ನಗರದ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ ನಾರಾಯಣಪುರದಲ್ಲಿರುವ ಬೈಕ್ ಶೋರೂಮಿಗೆ ಬೆಂಕಿಬಿದ್ದು ಯಮಹಾ ಬ್ರ್ಯಾಂಡಿನ ಸುಮಾರು 60ಬೈಕ್ ಗಳು ಅಗ್ನಿಗಾಹುತಿಯಾಗಿದ್ದವು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಶೋರೂಮ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!