AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ […]

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 26, 2019 | 12:16 PM

Share

ಬೆಂಗಳೂರು: ನಿಂತಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಿಕಾನೇರ್‌ನಿಂದ ಯಶವಂತಪುರಕ್ಕೆ ಬಂದು ಸ್ಥಳಾವಕಾಶ ಇಲ್ಲದೆ ಇರುವುದರಿಂದ ಮೂರು ದಿನದ ಹಿಂದೆ ಬಂದಿದ್ದ 16588 ಹವಾ ನಿಯಂತ್ರಿತ ರೈಲು, ಚಿಕ್ಕಬಾಣಾವಾರ ನಿಲ್ದಾಣದಲ್ಲಿ ತಂಗಿತ್ತು. ರೈಲಿನ ಸೀಟ್‌ ನಂಬರ್ 25ರ ಬಳಿ ಬೆಂಕಿ ಹೊತ್ತುಕೊಂಡಿದ್ದು, ಸುಮಾರು 10 ಸೀಟುಗಳು ಸುಟ್ಟು ಭಸ್ಮವಾಗಿವೆ.

ಈ ವೇಳೆ ಸ್ಥಳಕ್ಕಾಗಮಿಸಿದ ಪೀಣ್ಯ ಅಗ್ನಿಶಾಮಕ ತಂಡದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ಮೂರು ದಿನಗಳಿಂದ ನಿಂತಿರುವುದರಿಂದ ಕಿಡಿಗೇಡಿಗಳ್ಯಾರೋ ಧೂಮಪಾನ ಮಾಡಿರುವುದರಿಂದ ಅಗ್ನಿ ಅವಘಡ ಸಂಭವಿಸಿರಬಹುದು ಅಥವಾ ಎಸಿ ಸರ್ಕ್ಯೂ‌ಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ಹಾಗು ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ