AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ

3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ
ಅಗ್ನಿ ಅವಘಡ
Shivaprasad B
| Edited By: |

Updated on: Jul 09, 2023 | 2:59 PM

Share

ಬೆಂಗಳೂರು: 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ (Fire breaks out) ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ತುಂಬಾ ದಟ್ಟ ಹೊಗೆ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಬು ಎಂಬುವವರಿಗೆ ಶಾಮಿಯಾನ ಸೇರಿದ್ದು, ಪೈಬರ್ ಗೋಡೌನ್​ ಆಗಿದ್ದರಿಂದ ಬೆಂಕಿ ವ್ಯಾಪಿಸಿದೆ. ಸುಮಾರು 25 ಲಕ್ಷ ರೂ. ಅಧಿಕ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿ ಆಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್

ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಆನೇಕಲ್​​: ದುಷ್ಕರ್ಮಿಗಳಿಂದ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿರುವಂತಹ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಪೋಲೀಸ್ ಠಾಣಾ ವ್ಯಾಪ್ತಿಯ ಸಿಕೆ ಪಾಳ್ಯದಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ 12.40 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಮುನಿರಾಜು ಎಂಬುವವರಿಗೆ ಸೇರಿದ ಇನ್ನೋವಾ ಕಾರುಗೆ ಬೆಂಕಿ ಹಚ್ಚಿದ್ದಾರೆ.

ಯಾವ ಉದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂಬುವುದು ಪೊಲೀಸ್​ ತನಿಖೆಯಿಂದ ಹೊರಬಿಳ್ಳಬೇಕಿದೆ. ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: Belagavi News: ಜೈನ ಸಾಧು-ಸಂತ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು; 108ನೇ ಸಿದ್ದಸೇನ ಮಹಾರಾಜ

ವಿದ್ಯುತ್ ತಂತಿ ತುಂಡಾಗಿ ರಸ್ತೆ ಮೇಲೆ ಬಿದ್ದು ಕಾಣಿಸಿಕೊಂಡ ಬೆಂಕಿ

ಯಾದಗಿರಿ: ತುಂಡಾದ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ. ವಿದ್ಯುತ್​​ ತಂತಿ ತುಂಡಾಗಿ ಬಿದ್ದ ಮಾರ್ಗದಲ್ಲೇ ಸಾರಿಗೆ ಬಸ್​ ಬರುತ್ತಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.

ಎರಡು ತಂತಿಗಳು ತುಂಡಾಗಿ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ಕೂಡಲೇ ಸ್ಥಳದಿಂದ ಜನರು ಓಡಿ ಹೋಗಿದ್ದಾರೆ. ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್