ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ

3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ
ಅಗ್ನಿ ಅವಘಡ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 09, 2023 | 2:59 PM

ಬೆಂಗಳೂರು: 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ (Fire breaks out) ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ತುಂಬಾ ದಟ್ಟ ಹೊಗೆ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಬು ಎಂಬುವವರಿಗೆ ಶಾಮಿಯಾನ ಸೇರಿದ್ದು, ಪೈಬರ್ ಗೋಡೌನ್​ ಆಗಿದ್ದರಿಂದ ಬೆಂಕಿ ವ್ಯಾಪಿಸಿದೆ. ಸುಮಾರು 25 ಲಕ್ಷ ರೂ. ಅಧಿಕ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿ ಆಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್

ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಆನೇಕಲ್​​: ದುಷ್ಕರ್ಮಿಗಳಿಂದ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿರುವಂತಹ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಪೋಲೀಸ್ ಠಾಣಾ ವ್ಯಾಪ್ತಿಯ ಸಿಕೆ ಪಾಳ್ಯದಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ 12.40 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಮುನಿರಾಜು ಎಂಬುವವರಿಗೆ ಸೇರಿದ ಇನ್ನೋವಾ ಕಾರುಗೆ ಬೆಂಕಿ ಹಚ್ಚಿದ್ದಾರೆ.

ಯಾವ ಉದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂಬುವುದು ಪೊಲೀಸ್​ ತನಿಖೆಯಿಂದ ಹೊರಬಿಳ್ಳಬೇಕಿದೆ. ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: Belagavi News: ಜೈನ ಸಾಧು-ಸಂತ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು; 108ನೇ ಸಿದ್ದಸೇನ ಮಹಾರಾಜ

ವಿದ್ಯುತ್ ತಂತಿ ತುಂಡಾಗಿ ರಸ್ತೆ ಮೇಲೆ ಬಿದ್ದು ಕಾಣಿಸಿಕೊಂಡ ಬೆಂಕಿ

ಯಾದಗಿರಿ: ತುಂಡಾದ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ. ವಿದ್ಯುತ್​​ ತಂತಿ ತುಂಡಾಗಿ ಬಿದ್ದ ಮಾರ್ಗದಲ್ಲೇ ಸಾರಿಗೆ ಬಸ್​ ಬರುತ್ತಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.

ಎರಡು ತಂತಿಗಳು ತುಂಡಾಗಿ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ಕೂಡಲೇ ಸ್ಥಳದಿಂದ ಜನರು ಓಡಿ ಹೋಗಿದ್ದಾರೆ. ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ