AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ

ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ​ಗೋಡೌನ್​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳ ಸಿಬ್ಬಂದಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 09, 2023 | 7:41 AM

Share

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ಗೋಡೌನ್​​​​​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ. ಯೋಗಿ ಪ್ಲೆಕ್ಸಿಬಲ್ ಪ್ಯಾಕೇಜಿಂಗ್ ಕಂಪನಿಯಲ್ಲಿ ಈ ಅವಘಡ ನಡೆದಿದ್ದು, ಎರಡು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನ ಬಂದಿದ್ದು, ಗೋಡೋನ್ ಕ್ಲೋಸ್ ಆದ ಹಿನ್ನಲೆ ಕಿಟಕಿ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕಾಗಮಿಸಿದ ಕಾಮಾಕ್ಷಿ ಪ‍ಾಳ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್​ನಲ್ಲಿ ಡ್ರ್ಯಾಗರ್ ತೋರಿಸಿ ಬೈಕ್ ಸವಾರನಿಗೆ ಬೆದರಿಕೆ ಹಾಕಿದ್ದ ಕಾರು ಚಾಲಕ ಅರೆಸ್ಟ್

ಬೆಂಗಳೂರು: ಡ್ರ್ಯಾಗರ್ ಹಿಡಿದು ಬೈಕ್ ಸವಾರನಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ರಾಮಮೂರ್ತಿ ನಗರ ಠಾಣಾ ಪೊಲೀಸರು, ಆರೋಪಿ ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೆಆರ್ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮೊಬೈಲ್​ನಲ್ಲಿ ಮಾತಾಡುತ್ತಾ ಟಾಟಾ ಏಸ್​ನಲ್ಲಿ ಬರುತ್ತಿದ್ದ ಅರುಣ್ ಕುಮಾರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದನು. ಇದನ್ನು ಪ್ರಶ್ನೆ ಮಾಡಿದ್ದ ಸವಾರ ಪ್ರಕಾಶ್ ಎಂಬುವರಿಗೆ ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದನು.

ಇದನ್ನೂ ಓದಿ:Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕುತ್ತಿದ್ದಾಗ ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡ ಪ್ರಕಾಶ್, ತನ್ನ ಟ್ವಿಟರ್​ ಖಾತೆ ಮೂಲಕ ವಿಡಿಯೋ ಹಂಚಿಕೊಂಡು ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಬೆಂಗಳೂರು ಪೊಲೀಸ್ ಖಾತೆಯನ್ನು ಟ್ಯಾಗ್ ಮಾಡಿದ್ದರು. ಇತ್ತ ವಿಡಿಯೋ ನೋಡಿದ ರಾಮಮೂರ್ತಿ ನಗರ ಪೊಲೀಸರು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಈ ವೇಳೆ ಬೆದರಿಕೆ ಹಾಕಿದ ವ್ಯಕ್ತಿ ಕೆಆರ್​ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್​ ಎಂದು ತಿಳಿದುಬಂದಿದೆ. ಅದರಂತೆ ಅರುಣ್​ನನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?