AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ

ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ​ಗೋಡೌನ್​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳ ಸಿಬ್ಬಂದಿ
ಕಿರಣ್ ಹನುಮಂತ್​ ಮಾದಾರ್
|

Updated on: Apr 09, 2023 | 7:41 AM

Share

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ಗೋಡೌನ್​​​​​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ. ಯೋಗಿ ಪ್ಲೆಕ್ಸಿಬಲ್ ಪ್ಯಾಕೇಜಿಂಗ್ ಕಂಪನಿಯಲ್ಲಿ ಈ ಅವಘಡ ನಡೆದಿದ್ದು, ಎರಡು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನ ಬಂದಿದ್ದು, ಗೋಡೋನ್ ಕ್ಲೋಸ್ ಆದ ಹಿನ್ನಲೆ ಕಿಟಕಿ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕಾಗಮಿಸಿದ ಕಾಮಾಕ್ಷಿ ಪ‍ಾಳ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್​ನಲ್ಲಿ ಡ್ರ್ಯಾಗರ್ ತೋರಿಸಿ ಬೈಕ್ ಸವಾರನಿಗೆ ಬೆದರಿಕೆ ಹಾಕಿದ್ದ ಕಾರು ಚಾಲಕ ಅರೆಸ್ಟ್

ಬೆಂಗಳೂರು: ಡ್ರ್ಯಾಗರ್ ಹಿಡಿದು ಬೈಕ್ ಸವಾರನಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ರಾಮಮೂರ್ತಿ ನಗರ ಠಾಣಾ ಪೊಲೀಸರು, ಆರೋಪಿ ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೆಆರ್ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮೊಬೈಲ್​ನಲ್ಲಿ ಮಾತಾಡುತ್ತಾ ಟಾಟಾ ಏಸ್​ನಲ್ಲಿ ಬರುತ್ತಿದ್ದ ಅರುಣ್ ಕುಮಾರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದನು. ಇದನ್ನು ಪ್ರಶ್ನೆ ಮಾಡಿದ್ದ ಸವಾರ ಪ್ರಕಾಶ್ ಎಂಬುವರಿಗೆ ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದನು.

ಇದನ್ನೂ ಓದಿ:Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕುತ್ತಿದ್ದಾಗ ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡ ಪ್ರಕಾಶ್, ತನ್ನ ಟ್ವಿಟರ್​ ಖಾತೆ ಮೂಲಕ ವಿಡಿಯೋ ಹಂಚಿಕೊಂಡು ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಬೆಂಗಳೂರು ಪೊಲೀಸ್ ಖಾತೆಯನ್ನು ಟ್ಯಾಗ್ ಮಾಡಿದ್ದರು. ಇತ್ತ ವಿಡಿಯೋ ನೋಡಿದ ರಾಮಮೂರ್ತಿ ನಗರ ಪೊಲೀಸರು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಈ ವೇಳೆ ಬೆದರಿಕೆ ಹಾಕಿದ ವ್ಯಕ್ತಿ ಕೆಆರ್​ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್​ ಎಂದು ತಿಳಿದುಬಂದಿದೆ. ಅದರಂತೆ ಅರುಣ್​ನನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು