AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ; ಓರ್ವನ ಸ್ಥಿತಿ ಗಂಭೀರ

ಬೆಂಗಳೂರಿನ ಲಗ್ಗೆರೆ ಬಳಿಯ ಮನೆಯಲ್ಲಿ ಒಟ್ಟು ಪೈಪ್​ಗಳನ್ನು ಇಟ್ಟು ರೀಫಿಲಿಂಗ್  ಮಾಡಲಾಗುತ್ತಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ; ಓರ್ವನ ಸ್ಥಿತಿ ಗಂಭೀರ
ಪೈಪ್ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ
TV9 Web
| Edited By: |

Updated on:Aug 09, 2021 | 1:11 PM

Share

ಬೆಂಗಳೂರು: ಪಿವಿಸಿ ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿಯ ಮನೆಯಲ್ಲಿ ಪೈಪ್​ಗಳನ್ನು ಇಟ್ಟು ರೀಫಿಲಿಂಗ್  ಮಾಡಲಾಗುತ್ತಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ (Fire) ನಂದಿಸಿದ್ದು, ಈ ಸಂಬಂಧ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೊಯ್ಡಾ: ಹೊತ್ತಿ ಉರಿದ ಬ್ಯಾಗ್​ ತಯಾರಿಕಾ ಕಾರ್ಖಾನೆ ನೊಯ್ಡಾದ ಸೆಕ್ಟರ್​ 63 ಪ್ರದೇಶದಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಉಂಟಾಗಿದೆ. ಸ್ಥಳಕ್ಕೆ ಸುಮಾರು 6 ಅಗ್ನಿಶಾಮಕ ದಳಗಳು ಆಗಮಿಸಿ ಬೆಂಕಿ ನಂದಿಸಿವೆ. ಕಾರ್ಖಾನೆಗೆ ಬೆಂಕಿ ಬಿದ್ದ ಫೋಟೋಗಳನ್ನು ಎಎನ್​ಐ ಶೇರ್ ಮಾಡಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದು ಆ ಫೋಟೋಗಳನ್ನು ನೋಡಿದರೆ ಗೊತ್ತಾಗುತ್ತದೆ. ಕಾರ್ಖಾನೆ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಬೆಂಕಿಯ ಜ್ವಾಲೆ ಧಗಧಗನೆ ಹೊತ್ತಿ ಉರಿದಿದ್ದನ್ನು ನೋಡಬಹುದು.

ಒಂದು ಕಾರ್ಖಾನೆಯಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ನಂದಿಸುವ ಪ್ರಯತ್ನದಲ್ಲಿದ್ದಾಗಲೇ, ಪಕ್ಕದಲ್ಲೇ ಇದ್ದ ಇನ್ನೊಂದು ಕಾರ್ಖಾನೆಗೂ ಬೆಂಕಿ ತಗುಲಿದೆ. ಅದಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರೂ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಈ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್​ಸರ್ಕ್ಯೂಟ್​ ಕಾರಣ ಎನ್ನಲಾಗಿದೆ. ಕಾರ್ಖಾನೆ ಎಚ್​-458 ಏರಿಯಾದಲ್ಲಿದ್ದು, ರಾತ್ರಿ 9 ಗಂಟೆ ಹೊತ್ತಿಗೆ ಅಗ್ನಿ ದುರಂತ ಸಂಭವಿಸಿದೆ ಎಂದು ಗೌತಮ ಬುದ್ಧ ನಗರದ ಅಗ್ನಿ ಸುರಕ್ಷತಾ ಮುಖ್ಯಾಧಿಕಾರಿ ಅರುಣ್​ ಕುಮಾರ್​ ತಿಳಿಸಿದ್ದಾರೆ.

ಇದು ಚರ್ಮದ ಬ್ಯಾಗ್​, ಬೆಲ್ಟ್​ ಉತ್ಪಾದನಾ ಕಂಪನಿಯಾಗಿದೆ. ಇಲ್ಲಿ ಇರುವುದೆಲ್ಲ ಹೊತ್ತಿ ಉರಿಯುವಂಥದ್ದೇ ಆಗಿರುವುದರಿಂದ ಬೆಂಕಿಯ ತೀವ್ರತೆ ಬೇಗನೇ ಹೆಚ್ಚಾಗಿದೆ. ಅಷ್ಟೇ ಅಲ್ಲ, ಪಕ್ಕದಲ್ಲೇ ಇದ್ದ ಕಾಟನ್​ ಉತ್ಪನ್ನಗಳ ಕಾರ್ಖಾನೆಗೂ ಬಹುಬೇಗನೇ ಪಸರಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅದೃಷ್ಟವಶಾತ್​ ಯಾರಿಗೂ ಗಾಯ ಆಗಲಿಲ್ಲ. ದೊಡ್ಡಮಟ್ಟದಲ್ಲಿ ಯಾವುದೇ ಅಪಾಯ ಆಗಲಿಲ್ಲ. ಮೊದಲು ಆರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದವು. ಆದರೆ ಬಳಿಕ ಬೆಂಕಿಯ ಜ್ವಾಲೆ ಹೆಚ್ಚಾದಂತೆ, ಮತ್ತೂ 9 ಅಗ್ನಿಶಾಮಕ ದಳಗಳು ಬರಬೇಕಾಯ್ತು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ

Published On - 1:08 pm, Mon, 9 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ